Advertisement

Container ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಜಾನುವಾರುಗಳ ರಕ್ಷಣೆ… ಓರ್ವ ಬಂಧನ

06:03 PM Jun 06, 2024 | Team Udayavani |

ಕುಮಟಾ: ಕಂಟೈನರ್ ವಾಹನದಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ವೇಳೆ ದಾಳಿ ನಡೆಸಿದ ಪೊಲೀಸರು ಜಾನುವಾರುಗಳನ್ನು ರಕ್ಷಣೆ ಮಾಡಿ ಓರ್ವ ಆರೋಪಿ ಹಾಗೂ ವಾಹನವನ್ನು ವಶಕ್ಕೆ ಪಡೆದುಕೊಂಡ ಘಟನೆ ಹೊಳೆಗದ್ದೆ ಟೋಲ್ ಗೇಟ್ ಬಳಿ ನಡೆದಿದೆ.

Advertisement

ಕೇರಳ ಕಾಸರಕೋಡು ಮೂಲದ ಜೈನುದ್ದೀನ್ ಜಕ್ರಿಯಾ ಎಂಬಾತನನ್ನು ಬಂಧಿಸಲಾಗಿದ್ದು, ಕಂಟೈನರ್ ಚಾಲಕ ಶಾಹಿದ್,ಕ್ಲೀನ‌ರ್ ಮುಕ್ರಂ ತಲೆ ಮರೆಸಿಕೊಂಡಿದ್ದಾರೆ. ಕಂಟೈನರ್ ವಾಹನದಲ್ಲಿ 21 ಜಾನುವಾರುಗಳನ್ನು ಅಕ್ರಮ, ಹಿಂಸಾತ್ಮಕವಾಗಿ ಕಲಘಟಗಿಯಿಂದ ಕೇರಳಕ್ಕೆ ಸಾಗಾಟ ಮಾಡಲಾಗುತ್ತಿತ್ತು ಎನ್ನಲಾಗಿದೆ. ಈ ಬಗ್ಗೆ ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದ ಕುಮಟಾ ಪೊಲೀಸರು ಹೊಳೆಗದ್ದೆ ಟೋಲ್‌ಗೇಟ್‌ ಬಳಿ ವಾಹನ ತಡೆದಿದ್ದಾರೆ.ಈ ವೇಳೆ ತಪಾಸಣೆ ನಡೆಸಿದಾಗ ವಿಷಯ ಬೆಳಕಿಗೆ ಬಂದಿದೆ.

ನಾಲ್ವರು ಆರೋಪಿಗಳ ಪೈಕಿ ಪೋಲೀಸರು ಓರ್ವನನ್ನು ವಶಕ್ಕೆ ಪಡೆದಿದ್ದು,ಇನ್ನುಳಿದ ಮೂವರು ಪರಾರಿಯಾಗಿದ್ದಾರೆ.ಲಾರಿಯಲ್ಲಿದ್ದ ಜಾನುವಾರುಗಳನ್ನ ರಕ್ಷಣೆ ಮಾಡಿದ್ದು, ಆರೋಪಿ ಓರ್ವನನ್ನ ಬಂಧಿಸಲಾಗಿದೆ.ಈ ಬಗ್ಗೆ ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆಸಿದ್ದಾರೆ.

ಇದನ್ನೂ ಓದಿ: Minister ಹುದ್ದೆಗೆ ಸ್ವಇಚ್ಛೆಯಿಂದ ರಾಜೀನಾಮೆ ನೀಡುತ್ತಿದ್ದೇನೆ: ನಾಗೇಂದ್ರ ಘೋಷಣೆ

Advertisement

Udayavani is now on Telegram. Click here to join our channel and stay updated with the latest news.

Next