Advertisement

ಕುಮಟಾ: ನದಿ ತೀರದ ಪ್ರದೇಶಗಳಲ್ಲಿ ಪ್ರವಾಹ ಭೀತಿ

08:36 PM Jul 23, 2023 | Team Udayavani |

ಕುಮಟಾ: ತಾಲೂಕಿನಾದ್ಯಂತ ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಗಾಳಿ ಮಳೆಯಿಂದಾಗಿ ಅಘನಾಶಿನಿ ನದಿಯ ನೀರಿನ ಮಟ್ಟ ಹೆಚ್ಚಾಗಿದ್ದು, ನದಿ ತೀರದ ಪ್ರದೇಶಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ.

Advertisement

ಅಘನಾಶಿನಿ ನದಿಯು ತುಂಬಿ ಅಪಾಯ ಮಟ್ಟದಲ್ಲಿ ಹರಿಯುತ್ತಿರುವುದರಿಂದ ನದಿ ತೀರದಲ್ಲಿ ವಾಸಿಸುತ್ತಿರುವ ಜನರಿಗೆ ಎಚ್ಚರಿಕೆ ನೀಡಲಾಗಿದೆ‌.ನಿರಂತರವಾಗಿ ಸುರಿದ ಗಾಳಿ ಮಳೆಗೆ ತಾಲೂಕಿನ ನದಿ ತೀರ ಭಾಗದಲ್ಲಿ ನೆರೆ ಪರಿಸ್ಥಿತಿ ಉಂಟಾಗಿದ್ದು, ದೀವಗಿ, ಹೆಗಡೆ, ಸಂತೆಗುಳಿ, ಮಿರ್ಜಾನ್ ,ಛತ್ರಕೂರ್ವೆ ಭಾಗದಲ್ಲಿ ಮನೆಗಳಿಗೆ ನೀರು ನುಗ್ಗುವ ಸಾದ್ಯತೆ ಹೆಚ್ಚಾಗಿದೆ.

ಮಳೆಯ ತೀವ್ರತೆಗೆ ತಾಲೂಕಿನ ಸೊಪ್ಪಿನ ಹೊಸಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ ಒಂದು ಮನೆ ಸಂಪೂರ್ಣ ಕುಸಿದು ಬಿದ್ದಿದ್ದು, ಉಳಿದಂತೆ ಮೂರು ಮನೆಗಳಿಗೆ ಭಾಗಶಃ ಹಾನಿಯಾಗದೆ.ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ದೀವಗಿ ಬಳಿ ಮರದ ರೆಂಬೆ ಮುರಿದು ಬಿದ್ದದ್ದು ಗ್ರಾಮಸ್ಥರು ತೆರವು ಗೊಳಿಸಿ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ.

ಇನ್ನು ತಾಲೂಕಾಡಳಿತವು ನೆರೆ ಪ್ರದೇಶದಲ್ಲಿ ಖಾಳಜಿ ಕೇಂದ್ರಗಳನ್ನು ತೆರಯಲು ಸೂಚಿಸಿದ್ದು, ಜನರು ನೆರೆಯ ಪೂರ್ವ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ತಿಳಿಸಿದೆ. ತುರ್ತು ಪರಿಸ್ಥಿತಿಯಲ್ಲಿ ದೋಣಿಗಳನ್ನು ಬಳಸಿಕೊಂಡು ಸುರಕ್ಷಿತ ಸ್ಥಳಕ್ಕೆ ಜನರನ್ನು ಸ್ಥಳಾಂತರಿಸುವ ವ್ಯವಸ್ಥೆ ಮಾಡಿರುವುದಾಗಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next