Advertisement
ಜಿಲ್ಲಾ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ರತ್ನಾಕರ ನಾಯ್ಕ ಮಾತನಾಡಿ, ತಾಲೂಕಿನಲ್ಲಿಂದು ಮಳೆಯಿಲ್ಲದೆ ಕುಡಿಯುವ ನೀರಿನ ಬವಣೆ ಹೆಚ್ಚಾಗಿದೆ. ಆದರೆ ಶೈಕ್ಷಣಿಕ ಕ್ಷೇತ್ರದಲ್ಲಿ ರ್ಯಾಂಕ್ಗಳ ಸುರಿಮಳೆ ಬರುತ್ತಿದೆ. ಕನ್ನಡ ಮಾಧ್ಯಮದಲ್ಲಿ ಜಿಲ್ಲೆಯಲ್ಲಿಯೇ ಸಾಧನೆಗೈಯುತ್ತಿರುವ ಈ ಶಾಲೆ ಸಂಸ್ಕಾರಯುತ ಶಿಕ್ಷಣ ನೀಡುತ್ತಿರುವುದು ಮಸಂತಸ ತಂದಿದೆ ಎಂದರು.
Related Articles
Advertisement
ರಾಜ್ಯಮಟ್ಟದಲ್ಲಿ ರ್ಯಾಂಕ್ ಪಡೆದ ಪ್ರಣೀತ ರವಿರಾಜ ಕಡ್ಲೆ, ಶಾಲೆಗೆ ದ್ವಿತೀಯ ಸ್ಥಾನ ಪಡೆದ ವಿಶ್ವಾಸ ವೆಂಕಟೇಶ ಪೈ ಹಾಗೂ ತೃತೀಯ ಸ್ಥಾನ ಪಡೆದ ಗೌತಮಿ ಪರಮಯ್ಯ ಪಟಗಾರ ಅವರನ್ನು ಅಭಿನಂದಿಸಿ, ಗೌರವಿಸಲಾಯಿತು. ನಿವೃತ್ತ ಶಿಕ್ಷಕಿ ಚಂದ್ರಕಲಾ ಮಾಪಾರಿ ಬಡ ಮತ್ತು ಅರ್ಹ ವಿದ್ಯಾರ್ಥಿಗಳಿಗೆ ನೀಡುವಂತೆ ರೂ. ಹತ್ತು ಸಾವಿರ ಮೊತ್ತವನ್ನು ಮುಖ್ಯಾಧ್ಯಾಪಕರಿಗೆ ಹಸ್ತಾಂತರಿಸಿದರು. ಮುಂದಿನ ದಿನಗಳಲ್ಲಿ ಅವಶ್ಯ ದತ್ತಿನಿಧಿ ಸ್ಥಾಪಿಸುವುದಾಗಿ ತಿಳಿಸಿದರು. ಮುಖ್ಯಾಧ್ಯಾಪಕ ಎನ್.ಆರ್. ಗಜು ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು. ಶಿಕ್ಷಕ ಸುರೇಶ ಪೈ ಫಲಿತಾಂಶ ವಿಶ್ಲೆಷಿಸಿದರು. ಕಿರಣ ಪ್ರಭು ಶಾಲೆಯ ಇತಿಹಾಸವನ್ನು ಪ್ರಸ್ತುತ ಪಡಿಸಿದರು. ವಿಷ್ಣು ಭಟ್ಟ ವಂದಿಸಿದರು.