Advertisement

Kundagol: ಆರೇ ತಿಂಗಳಲ್ಲಿ ಕಿತ್ತುಹೋದ ರಸ್ತೆ

05:25 PM Nov 07, 2023 | Team Udayavani |

ಕುಂದಗೋಳ: ಸರಕಾರಿ ಕೆಲಸ ದೇವರ ಕೆಲಸ ಎಂದು ವಿಧಾನಸೌಧ ಮುಂಭಾಗದಲ್ಲಿ ಹಾಕಲಾಗಿದೆ. ಆದರೆ ತಾಲೂಕಿನಲ್ಲಿ ಈ ಮಾತು ಅಕ್ಷರ ಸಹ ವಿರುದ್ಧವಾಗಿದ್ದು ಪ್ರಧಾನಮಂತ್ರಿ ಗ್ರಾಮ ಸಡಕ್‌ ಯೋಜನೆ ಕಾಮಗಾರಿ ರಸ್ತೆಗೆ 7.6 ಕೋಟಿ ರೂ. ಖರ್ಚು ಮಾಡಿದರೂ ಕೇವಲ 6-7 ತಿಂಗಳಲ್ಲಿಯೇ ರಸ್ತೆ ಹಾಳಾಗಿ ತನ್ನ ಮೊದಲಿನ ಸ್ವರೂಪದಲ್ಲಿ ಕಾಣತೊಡಗಿದೆ.

Advertisement

ತಾಲೂಕು ಹಿಂದುಳಿದ ತಾಲೂಕು ಎಂದು ಹಣೆಪಟ್ಟಿ ಇದ್ದರೂ ಇಲ್ಲಿ ಅಭಿವೃದ್ಧಿ ಕಾಮಗಾರಿಗಳು ನಡೆಯುವುದೇ ಅಪರೂಪ.
ತಾಲೂಕಿನಲ್ಲಿ ರಸ್ತೆ ಮೇಲೆ ಸಂಚರಿಸುವುದೆಂದರೆ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಹೋಗುವ ಸ್ಥಿತಿ ನಿರ್ಮಾಣಗೊಂಡಿದೆ.

ಬಿಜೆಪಿ ಸರ್ಕಾರದ ಅವಧಿಯಲ್ಲಿ ಯಲಿವಾಳದಿಂದ ಕಮಡೊಳ್ಳಿ/ಹಂಚಿನಾಳ ರಸ್ತೆಗೆ ಕೂಡುವ ಕೂಬಿಹಾಳ ರಸ್ತೆ ನಿರ್ಮಾಣಕ್ಕೆ
ಪ್ರಧಾನ ಮಂತ್ರಿ ಗ್ರಾಮ ಸಡಕ್‌ ಯೋಜನೆಯ 3ನೇ ಹಂತದ ಕಾಮಗಾರಿಯಲ್ಲಿ 7 ಕಿಮೀ ರಸ್ತೆ ಅಭಿವೃದ್ಧಿಗೆ ಅನುದಾನ
ಬಿಡುಗಡೆಗೊಳಿಸಲಾಗಿತ್ತು. ಗುತ್ತಿಗೆದಾರರು ಸಹ ಕಾಮಗಾರಿ ಪೂರ್ಣಗೊಳಿಸಿ ಕೇವಲ 6 ತಿಂಗಳು ಕಳೆಯುವುದರೊಳಗೆ ರಸ್ತೆಗೆ ಹಾಕಿರುವ ಡಾಂಬರ್‌ ಕಿತ್ತುಹೋಗಿ ಕಲ್ಲುಗಳು ರಸ್ತೆ ತುಂಬ ಕಾಣತೊಡಗಿವೆ. ಈ ರಸ್ತೆ ನೋಡಿದರೆ ಹಲವು ವರ್ಷಗಳ ಹಿಂದೆಯೇ ರಸ್ತೆ ನಿರ್ಮಿಸಲಾಗಿದೆ ಎಂದು ಭಾಸವಾಗುತ್ತದೆ.

ಇದೀಗ ಈ ರಸ್ತೆಯ ಮೇಲೆ ದ್ವಿಚಕ್ರ ವಾಹನ ಸಹ ಸಂಚರಿಸದಂತಾಗಿದ್ದು ಸ್ವಲ್ಪ ಯಾಮಾರಿದರೂ ಕಲ್ಲುಗಳು ಹಾಗೂ ಗುಂಡಿ ತಪ್ಪಿಸಲು ಹೋಗಿ ಬೀಳುವ ಸ್ಥಿತಿ ನಿರ್ಮಾಣಗೊಂಡಿದೆ. ತಾಲೂಕಿಗೆ ಅಭಿವೃದ್ಧಿ ಯೋಜನೆಗಳು ಬರುವುದೇ ಅಪರೂಪ. ಬಂದ
ಅನುದಾನವಾದರೂ ಸಮರ್ಪಕವಾಗಿ ಅನುಷ್ಠಾನಗೊಂಡು ಉತ್ತಮ ರಸ್ತೆ ನಿರ್ಮಿಸಿ ಸಂಚಾರಕ್ಕೆ ನೀಡಬೇಕಾದ ಇಲಾಖೆ
ಕಣ್ಣುಮುಚ್ಚಿ ಕುಳಿತಿರುವುದರಿಂದ ರಸ್ತೆ ಈಗ ಸಂಪೂರ್ಣ ಹಾಳಾಗಿದೆ ಎಂದು ಪ್ರಯಾಣಿಕರು ದೂರಿದ್ದಾರೆ. ಕೇಂದ್ರ ಸರಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಗ್ರಾಮ ಸಡಕ್‌ ಯೋಜನೆ ಗುತ್ತಿಗೆದಾರರ ಅಸಮರ್ಪಕ ಕಾಮಗಾರಿಯಿಂದ ಹಳ್ಳ ಹಿಡಿಯುತ್ತಿದೆ. ಈಗಲಾದರೂ ಈ ಭಾಗದ ಸಂಸದರು, ಶಾಸಕರು,ಅಧಿ ಕಾರಿಗಳು ಸರ್ಕಾರದ ಹಣ ಪೋಲಾಗದಂತೆ ಕ್ರಮ ಕೈಗೊಳ್ಳಬೇಕಿದೆ.

ಕೆಲವೇ ತಿಂಗಳು ಹಿಂದೆ ನಿರ್ಮಿಸಿದ್ದ ರಸ್ತೆ ಸಂಪೂರ್ಣ ಹಾಳಾಗಿದ್ದು, ಗುತ್ತಿಗೆದಾರರಿಗೆ ರಸ್ತೆ ದುರಸ್ತಿ ಮಾಡಲು ಈಗಾಗಲೇ ನೋಟಿಸ್‌ ಜಾರಿ ಮಾಡಲಾಗಿದೆ.
ಎಂ.ಎಚ್‌.ದಿವಟರ
ಪಿಎಂಜಿಎಸ್‌ವೈ ಅಧಿಕಾರಿ

Advertisement

*ಶೀತಲ ಎಸ್‌.ಎಂ.

Advertisement

Udayavani is now on Telegram. Click here to join our channel and stay updated with the latest news.

Next