Advertisement

ಕುಂದಾಪುರ : ಸೈಕಲ್ ಗೆ ಢಿಕ್ಕಿಯಾದ ಕಾರು, ಸೈಕಲ್ ಸವಾರ ಸಾವು

01:27 PM Jul 28, 2021 | Team Udayavani |

ಕುಂದಾಪುರ: ಸೈಕಲ್‌ಗೆ ಕಾರು ಢಿಕ್ಕಿಯಾಗಿ, ಸವಾರ ಸಾವನ್ನಪ್ಪಿದ ದಾರುಣ ಘಟನೆ ಇಲ್ಲಿನ‌ ಹೆಮ್ಮಾಡಿ ಸಮೀಪದ ಜಾಲಾಡಿಯಲ್ಲಿ ಬುಧವಾರ ಸಂಭವಿಸಿದೆ.

Advertisement

ಹೆಮ್ಮಾಡಿಯ ಸಂತೋಷನಗರ ನಿವಾಸಿ ರಾಮ ಕುಲಾಲ್(60) ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ದುರ್ದೈವಿ. ರಾಮ ಕುಲಾಲ್ ಅವರು ಹೆಮ್ಮಾಡಿಯಿಂದ ತಮ್ಮ ಸೈಕಲ್ ನಲ್ಲಿ ತಲ್ಲೂರಿಗೆ ತೆರಳುತ್ತಿರುವ ಹೊತ್ತಿಗೆ ಈ ಅಪಘಾತ ನಡೆದಿದೆ. ಸೈಕಲ್‌ ಡಿವೈಡರ್ ಬದಿಯಿಂದ ರಸ್ತೆಯ ಎಡಗಡೆಗೆ ತಿರುಗಿಸಿದ ಪರಿಣಾಮ ಬೈಂದೂರು ಕಡೆಯಿಂದ ಕುಂದಾಪುರದತ್ತ ತೆರಳುತ್ತಿದ್ದ ಕಾರು ಸೈಕಲ್ ಗೆ ಢಿಕ್ಕಿಯಾಗಿದೆ.

ಢಿಕ್ಕಿಯ ರಭಸಕ್ಕೆ ಸೈಕಲ್‌ನಲ್ಲಿದ್ದ ರಾಮ ಕುಲಾಲ್ ಅವರು ಕೆಲ ದೂರ ಹೋಗಿ ಬಿದ್ದ ಪರಿಣಾಮ ತಲೆ ಹಾಗೂ ಕಾಲಿಗೆ ಗಂಭೀರ ಗಾಯಗಳಾಗಿತ್ತು. ತಕ್ಷಣವೇ ಗಂಗೊಳ್ಳಿಯ ಆಪತ್ಬಾಂಧವ ಆಂಬುಲೆನ್ಸ್‌ನ‌ ಇಬ್ರಾಹಿಂ‌ ಗಂಗೊಳ್ಳಿ ಸ್ಥಳಕ್ಕೆ‌ ಧಾವಿಸಿ ಆಸ್ಪತ್ರೆಗೆ ದಾಖಲಿಸುವ ಪ್ರಯತ್ನ‌ ನಡೆಸಿದರಾದರೂ ಅಷ್ಟರಲ್ಲಾಗಲೇ ಅವರು ಕೊನೆಯುಸಿರೆಳೆದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next