Advertisement

ಬೆಳಗಾವಿಯಲ್ಲಿ ಕುಂದಾಪುರ ಮೂಲದ ವ್ಯಕ್ತಿಯ ಮನೆಗೆ ನುಗ್ಗಿ ಕೊಲೆ

10:34 AM Sep 16, 2021 | Team Udayavani |

ಕುಂದಾಪುರ/ಬೆಳಗಾವಿ, ಸೆ.15: ಬೆಳಗಾವಿಯಲ್ಲಿ ಪಾನ್‌ ಬೀಡ ಅಂಗಡಿ ನಡೆಸುತ್ತಿದ್ದ ಗೋಳಿಯಂಗಡಿ ಸಮೀಪದ ಹಿಲಿಯಾಣದ ಮೂಲದ ನಿವಾಸಿ ಬಾಲಕೃಷ್ಣ ಶೆಟ್ಟಿ (54) ಅವರನ್ನು ರೌಡಿಶೀಟರ್‌ ಎನ್ನಲಾದ ವ್ಯಕ್ತಿಯೊಬ್ಬ ಚಾಕುವಿನಿಂದ ಇರಿದು ಕೊಲೆಗೈದ ಘಟನೆ ಮಂಗಳವಾರ ರಾತ್ರಿ ಬೆಳಗಾವಿಯಲ್ಲಿ ಸಂಭವಿಸಿದೆ.

Advertisement

ಇದನ್ನೂ ಓದಿ:ಬಸ್-ಕಂಟೈನರ್ ಲಾರಿ ನಡುವೆ ಅಪಘಾತ:ತಪ್ಪಿಸಲೆತ್ನಿಸಿದ ಲಾರಿ ಚಾಲಕನನ್ನು ಬೆನ್ನಟ್ಟಿದ ಸ್ಥಳೀಯರು

ಪ್ರಕರಣಕ್ಕೆ ಸಂಬಂಧಿಸಿದಂತೆ ದತ್ತಾತ್ರೇಯ ಆಲಿಯಾಸ್‌ ದತ್ತ ಶಿವಾನಂದ ಜಾಂತಿಕಟ್ಟಿ ಎನ್ನುವಾತನನ್ನು ಬಂಧಿ ಸಲಾಗಿದೆ. ಹಂತಕ ದತ್ತ ಮಂಗಳವಾರ ಮಧ್ಯಾಹ್ನ ಬೆಳಗಾವಿ ವಡಗಾವಿಯ ಬಾಲಕೃಷ್ಣ ಶೆಟ್ಟಿ ಅವರ ಬೀಡಾ ಅಂಗಡಿಗೆ ಬಂದು ಗುಟ್ಕಾ ಕೇಳಿದ್ದಾನೆ. ಆಗ ಬಾಲಕೃಷ್ಣ ಶೆಟ್ಟಿ ಹಣ ಕೇಳಿದಾಗ ಇಬ್ಬರ ಮಧ್ಯೆ ಜಗಳವಾಗಿತ್ತು. ಆಗ ಕುತ್ತಿಗೆಗೆ ಚಾಕು ಇಟ್ಟು ಬೆದರಿಕೆ ಹಾಕಿದ್ದ ಎನ್ನಲಾಗಿದೆ.

ಇದರಿಂದ ಭಯಭೀತರಾಗಿ ಶೆಟ್ಟಿ ಪಾನ್‌ ಶಾಪ್‌ ಬಂದ್‌ ಮಾಡಿ ಬೇರೆಯವರ ಮನೆಯಲ್ಲಿ ಉಳಿದುಕೊಂಡಿದ್ದರು. ರಾತ್ರಿ ಮನೆಗೆ ಹೋದಾಗ ದತ್ತ ಏಕಾಏಕಿ ನುಗ್ಗಿ ಬಂದು ಕೊಲೆಗೈದಿದ್ದಾನೆ ಎನ್ನಲಾಗಿದೆ. ಶೆಟ್ಟಿಯವರು 35 ವರ್ಷಗಳಿಂದ ಲಕ್ಷ್ಮೀ ನಗರದಲ್ಲಿ ಪಾನ್‌ ಬೀಡ ಅಂಗಡಿ ನಡೆಸುತ್ತಿದ್ದು, ಪತ್ನಿ, ಪುತ್ರ, ಪುತ್ರಿಯೊಂದಿಗೆ ಅಲ್ಲಿಯೇ ನೆಲೆಸಿದ್ದರು.

ಬಾಲಕೃಷ್ಣ ಅವರ ಮನೆ ಗೋಳಿಯಂಗಡಿ ಸಮೀಪದ ಹಿಲಿಯಾಣ. ಪತ್ನಿ ಮನೆ ಗುಜ್ಜಾಡಿ ಗ್ರಾಮದ ಮಂಕಿ. ಶೆಟ್ಟಿಯವರ ಪತ್ನಿ ಮತ್ತು ಮಕ್ಕಳು ಸೋಮವಾರ ರಾತ್ರಿ ಬೆಳಗಾವಿಯಿಂದ ಊರಿಗೆ ಹೊರಟಿದ್ದು, ಮಂಗಳವಾರ ಬೆಳಗ್ಗಿನ ಜಾವ ಊರಿಗೆ ಬಂದಿದ್ದರು.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next