Advertisement

Kundapura: ವ್ಯಕ್ತಿಗೆ ಚೂರಿ ಇರಿತ; ಗಂಭೀರ ಗಾಯ

10:32 PM Oct 01, 2023 | Team Udayavani |

ಕುಂದಾಪುರ: ಕಾರಿನಲ್ಲಿ ಬಂದಿದ್ದ ಅಪರಿಚಿತನೊಬ್ಬ ಯುವಕನಿಗೆ ಚೂರಿ ಇರಿದು ಪರಾರಿಯಾದ ಘಟನೆ ರವಿವಾರ ಸಂಜೆ ಕುಂದಾಪುರದ ಚಿಕನ್‌ ಸಾಲ್‌ ರಸ್ತೆಯ ಅಂಚೆ ಕಚೇರಿ ಸಮೀಪ ಸಂಜೆ 7 ಗಂಟೆ ಸುಮಾರಿಗೆ ಸಂಭವಿಸಿದೆ.

Advertisement

ಖಾರ್ವಿಕೇರಿಯ ನಿವಾಸಿ ರಾಘವೇಂದ್ರ ಶೇರಿಗಾರ್ (42) ಅಲಿಯಾಸ್‌ ಬನ್ಸ್ ರಾಘು ಚೂರಿ ಇರಿತಕ್ಕೊಳಗಾದವರು. ಗಂಭೀರ ಗಾಯಗೊಂಡ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.

ರಾಘವೇಂದ್ರ ಅವರು ಕಾರಿನಲ್ಲಿ ತೆರಳುತ್ತಿದ್ದ ವೇಳೆ ಇನ್ನೊಂದು ಕಾರಿನಲ್ಲಿ ಬಂದಿದ್ದ ಅಪರಿಚಿತ ವ್ಯಕ್ತಿ ರಾಘವೇಂದ್ರ ಕಾರನ್ನು ಅಡ್ಡಗಟ್ಟಿ, ತೊಡೆಗೆ ಚೂರಿ ಇರಿದು, ಕಾರಿನಲ್ಲಿ ಪರಾರಿಯಾಗಿರುವುದಾಗಿ ತಿಳಿದು ಬಂದಿದೆ.
ಹಣಕಾಸು ಅಥವಾ ಇನ್ನು ಯಾವುದೋ ವೈಯಕ್ತಿಕ ಕಾರಣಕ್ಕೆ ಈ ಕೃತ್ಯ ಎಸಗಿರುವ ಸಾಧ್ಯತೆ ಇದೆ ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ಕುಂದಾಪುರ ಡಿವೈಎಸ್ಪಿ ಬೆಳ್ಳಿಯಪ್ಪ, ವೃತ್ತ ನಿರೀಕ್ಷಕ ನಂದ ಕುರ್ಮಾ, ಎಸ್‌ ಐ ವಿನಯ ಕೊರ್ಲಹಳ್ಳಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

 

Advertisement
Advertisement

Udayavani is now on Telegram. Click here to join our channel and stay updated with the latest news.

Next