Advertisement

ಶೀಘ್ರ ಕ್ಷಯರೋಗ ಪತ್ತೆ: ಚಿಕಿತ್ಸೆ ಆಂದೋಲನ

09:39 PM Jul 15, 2019 | Team Udayavani |

ಕಾರ್ಕಳ: ಜಿ.ಪಂ. ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿÇÉಾ ಕ್ಷಯ ರೋಗ ನಿಯಂತ್ರಣ ಕೇಂದ್ರ, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಇವುಗಳ ಆಶ್ರಯದಲ್ಲಿ ಕುಕ್ಕುಂದೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತಾಲೂಕು ಮಟ್ಟದ ಶೀಘ್ರ ಕ್ಷಯರೋಗ ಪತ್ತೆ ಹಾಗೂ ಚಿಕಿತ್ಸೆ ಆಂದೋಲನ ಕಾರ್ಯಕ್ರಮ ಜು. 15ರಂದು ನಡೆಯಿತು.
ಕುಕ್ಕುಂದೂರು ಗ್ರಾ.ಪಂ. ಅಧ್ಯಕ್ಷೆ ಸುಮನಾ ಎಂ. ರಾವ್‌ ಆಂದೋಲನಕ್ಕೆ ಚಾಲನೆ ನೀಡಿದರು.

Advertisement

ತಾಲೂಕು ಆರೋಗ್ಯಾಧಿಕಾರಿ ಡಾ| ಕೃಷ್ಣಾನಂದ ಶೆಟ್ಟಿ ಮಾತನಾಡಿ, ಕಾರ್ಕಳ ತಾಲೂಕಿನಾದ್ಯಂತ ಈ ಆಂದೋಲನ ನಡೆಯಲಿದ್ದು, ಈ ನಿಟ್ಟಿನಲ್ಲಿ 59 ತಂಡಗಳನ್ನು ರಚಿಸಿಲಾಗಿದೆ ಎಂದರು.

ಕಾರ್ಕಳ ತೋಟಗಾರಿಕೆ ರೈತ ಉತ್ಪಾದಕ ಕಂಪನಿ ಅಧ್ಯಕ್ಷ ಅಂತೋನಿ ಡಿ’ಸೋಜಾ, ಗ್ರಾ.ಪಂ. ಸದಸ್ಯರು ಕರಪತ್ರ ಬಿಡುಗಡೆಗೊಳಿಸಿದರು.
ಗ್ರಾ.ಪಂ. ಉಪಾಧ್ಯಕ್ಷ ರಾಜೇಶ್‌ ರಾವ್‌ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಡಾ| ಪ್ರತೀಕ್ಷಾ ಅವರು ಸ್ವಾಗತಿಸಿ, ಶಿವಕುಮಾರ್‌ ಕಾರ್ಯಕ್ರಮ ನಿರೂಪಿಸಿದರು. ಕುಮುದಾವತಿ ವಂದಿಸಿದರು. ಆಶಾ ಕಾರ್ಯಕರ್ತೆಯರು ಸಹಕರಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next