Advertisement

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

01:15 AM Apr 30, 2024 | Team Udayavani |

ಕುಂದಾಪುರ: ವಡೇರಹೋಬಳಿ ಗ್ರಾಮದ ನೆಹರೂ ಮೈದಾನದ ಎದುರು ಭರತ್‌ ಎಂಬವರು ಚಲಾಯಿಸುತ್ತಿದ್ದ ಬೈಕ್‌ ರಸ್ತೆ ಬದಿ ನಿಂತುಕೊಂಡಿದ್ದ ನಿಸಾರ್‌ ಅಹಮ್ಮದ್‌ (61) ಅವರಿಗೆ ಢಿಕ್ಕಿ ಹೊಡೆದಿದೆ.

Advertisement

ಗಾಯಾಳು ನಿಸಾರ್‌ ಕುಂದಾಪುರದಲ್ಲಿ ಪ್ರಥಮ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಾರಾಡಿ: ನೇಣು ಬಿಗಿದು ಆತ್ಮಹತ್ಯೆ
ಬ್ರಹ್ಮಾವರ: ಹಾರಾಡಿ ಗ್ರಾಮದ ಲಕ್ಷ್ಮಣ (49) ಬಾವಿಯ ನೀರು ಸೇದುವ ಹಗ್ಗದಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ವಿಪರೀತ ಮದ್ಯಪಾನ ಮಾಡುತ್ತಿದ್ದರು ಎನ್ನಲಾಗಿದೆ. ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next