Advertisement

ಕುಂದಾಪುರ: ಬಾವಿಗೆ ಬಿದ್ದ ಜಿಂಕೆಯ ರಕ್ಷಣೆ

07:38 PM Dec 04, 2020 | Mithun PG |

ಕುಂದಾಪುರ: ಕಂದಾವರ ಗ್ರಾಮದ ಹೇರಿಕೆರೆ ಎಂಬಲ್ಲಿ ಬಾವಿಗೆ ಬಿದ್ದ ಜಿಂಕೆಯೊಂದನ್ನು ಸ್ಥಳೀಯರ ಸಹಕಾರದಿಂದ ಅರಣ್ಯಾಧಿಕಾರಿಗಳು ಮೇಲೆತ್ತಿದ ಘಟನೆ ಶುಕ್ರವಾರ ನಡೆದಿದೆ.

Advertisement

ಇಲ್ಲಿನ ರಾಜೇಂದ್ರ ಎನ್ನುವರ ಮನೆ ಸಮೀಪದ ಬಾವಿಗೆ ಜಿಂಕೆ ಬಿದ್ದಿದ್ದು ಈ ಬಗ್ಗೆ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆಯವರು ಜಿಂಕೆಯನ್ನು ಮೇಲಕ್ಕೆತ್ತುವಲ್ಲಿ ಯಶಸ್ವಿಯಾಗಿದ್ದಾರೆ.

ಉಪವಲಯ ಅರಣ್ಯಾಧಿಕಾರಿ ಉದಯ್, ಚಾಲಕ ಅಶೋಕ್, ಅರಣ್ಯ ವೀಕ್ಷಕ ಸೋಮಶೇಖರ್ ರಕ್ಷಣಾ ಕಾರ್ಯದಲ್ಲಿ ಭಾಗವಹಿಸಿದ್ದು, ಸ್ಥಳೀಯರು ಸಹಕರಿಸಿದ್ದರು.

ಇದನ್ನೂ ಓದಿ: ಮಂಸೋರೆ ನಿರ್ದೇಶನದಲ್ಲಿ ಸ್ಯಾಂಡಲ್ ವುಡ್ ನಲ್ಲಿ ಘರ್ಜಿಸಲಿದ್ದಾಳೆ ‘ಅಬ್ಬಕ್ಕ’

ಇದನ್ನೂ ಓದಿ:  ಭಾರತ- ಆಸ್ಟ್ರೇಲಿಯಾ ನಡುವಿನ ಬಾರ್ಡರ್ – ಗವಾಸ್ಕರ್ ಸರಣಿಗಿದೆ ರೋಚಕ ಇತಿಹಾಸ!

Advertisement
Advertisement

Udayavani is now on Telegram. Click here to join our channel and stay updated with the latest news.

Next