Advertisement

Kundapur; ಕರ್ತವ್ಯಲೋಪ: ಸರಕಾರಿ ಶಾಲೆಯ ಶಿಕ್ಷಕ, ಮುಖ್ಯ ಶಿಕ್ಷಕ ಅಮಾನತು

06:53 PM Aug 17, 2023 | Team Udayavani |

ಕುಂದಾಪುರ: ವಲಯ ಶಿಕ್ಷಣಾಧಿಕಾರಿಗಳು ಆನಗಳ್ಳಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಕರ್ತವ್ಯಕ್ಕೆ ಗೈರು ಹಾಜರಾದ ಹಿನ್ನೆಲೆಯಲ್ಲಿ ಶಿಕ್ಷಕನನ್ನು ಅಮಾನತುಗೊಳಿಸಲಾಗಿದೆ.

Advertisement

ಶಿಕ್ಷಕ ಅಂಪಾರು ದಿನಕರ ಶೆಟ್ಟಿ ವಿರುದ್ಧ ದೀರ್ಘಕಾಲದಿಂದ ಶಾಲೆಗೆ ಗೈರುಹಾಜರಾದ ಬಗ್ಗೆ ದೂರುಗಳು ಬಂದಿದ್ದು, ಇದು ವಿದ್ಯಾರ್ಥಿಗಳ ಅಧ್ಯಯನದ ಮೇಲೆ ಪರಿಣಾಮ ಬೀರಿತ್ತು. ಈ ಹಿನ್ನಲೆಯಲ್ಲಿ ವಲಯ ಶಿಕ್ಷಣಾಧಿಕಾರಿ ಶಾಲೆಗೆ ಭೇಟಿ ನೀಡಿದ್ದು, ದಿನಕರ ಶೆಟ್ಟಿ ಬಹಳ ದಿನಗಳಿಂದ ಕರ್ತವ್ಯಕ್ಕೆ ಹಾಜರಾಗದಿರುವುದು ಹಾಗೂ ಅನುಮತಿ ಕೇಳದೇ ಇರುವುದು ಕಂಡುಬಂದಿದೆ. ಈ ವಿಷಯವನ್ನು ಮೇಲಧಿಕಾರಿಗಳ ಗಮನಕ್ಕೆ ತರದ ಕಾರಣ ಶಾಲೆಯ ಮುಖ್ಯ ಶಿಕ್ಷಕ ಜನಾರ್ದನ ಪಟಗಾರ ಅವರನ್ನೂ ಅಮಾನತುಗೊಳಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next