Advertisement

Kundapura: ಹಲ್ಲೆ,ಬೆದರಿಕೆ ಪ್ರಕರಣ: ಮತ್ತೆ ಮೂವರ ಬಂಧನ

01:15 AM Oct 26, 2024 | Team Udayavani |

ಕುಂದಾಪುರ: ಹಡವು ಗ್ರಾಮದ ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ತೆರಳುವ ಕ್ರಾಸ್‌ ಬಳಿ ಅ. 18ರ ರಾತ್ರಿ ಗುಂಪು ಕಟ್ಟಿಕೊಂಡು ಬಂದು ಬೈಂದೂರು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರು ಹಾಗೂ ಸ್ನೇಹಿತರಿಗೆ ಮಾರಾಕಾಯುಧಗಳಿಂದ ಹಲ್ಲೆ ನಡೆಸಿ, ಪಿಸ್ತೂಲ್‌ ತೋರಿಸಿ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರು ಆರೋಪಿಗಳನ್ನು ಶುಕ್ರವಾರ ಗಂಗೊಳ್ಳಿ ಪೊಲೀಸರು ಬಂಧಿಸಿದ್ದಾರೆ.

Advertisement

ಆರೋಪಿಗಳಾದ ವಿಶ್ವನಾಥ, ಪ್ರದೀಪ್‌, ಪ್ರವೀಣ್‌ ಬಂಧಿತರು. ಇದರೊಂದಿಗೆ ಪ್ರಕರಣದಲ್ಲಿ ಇಬ್ಬರು ಕಾನೂನು ಸಂಘರ್ಷಕ್ಕೊಳಗಾದ ಬಾಲಕರ ಸಹಿತ ಒಟ್ಟು 16 ಮಂದಿಯನ್ನು ಬಂಧಿಸಿದಂತಾಗಿದೆ. ಮೊದಲಿಗೆ 7 ಮಂದಿ, ಅನಂತರ 6 ಮಂದಿಯನ್ನು ಪೊಲೀಸರು ಬಂಧಿಸಿದ್ದರು. ಪ್ರಕರಣ ಸಂಬಂಧ 20ಕ್ಕೂ ಹೆಚ್ಚು ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next