Advertisement

Kundapura ಅಪರಾಧ ಸುದ್ದಿಗಳು

09:12 PM Sep 11, 2024 | Team Udayavani |

ಕಳವು
ಕುಂದಾಪುರ: ಆನಗಳ್ಳಿ ಗ್ರಾಮದ ಹೇರಿಕುದ್ರು ಆಸ್ಟೀನ ಡಿ ಅಲ್ಮೇಡ ಅವರ ಮನೆಯಲ್ಲಿ ಕಳ್ಳತನವಾಗಿದೆ.

Advertisement

ಅವರು ಕುಂದಾಪುರ ಸರಕಾರಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದು, ಮರಳಿ ಮನೆಗೆ ಬಂದು ನೋಡಿದಾಗ ಬಾಗಿಲ ಚಿಲಕವನ್ನು ಒಡೆದಿರುವುದು ಕಂಡುಬಂದಿತ್ತು. ಮನೆಯ ಒಳಗೆ ಸೊತ್ತುಗಳೆಲ್ಲ ಚೆಲ್ಲಾಪಿಲ್ಲಿಯಾಗಿ ಕಪಾಟಿನಲ್ಲಿದ್ದ 1.95 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಲಾಗಿದೆ. ಪ್ರಕರಣ ದಾಖಲಾಗಿದೆ.

ವಿವಾಹಿತೆ ಆತ್ಮಹತ್ಯೆ
ಕುಂದಾಪುರ: ಮೂಲತಃ ಸಾಗರದವರಾಗಿದ್ದು, ಕರ್ಕುಂಜೆ ಗ್ರಾಮದ ನೇರಳಕಟ್ಟೆ ಕೌಂಜೂರಿನ ಅಬ್ದುಲ್‌ ರೆಹಮಾನ್‌ ಅವರನ್ನು ವಿವಾಹವಾಗಿದ್ದ ಅಲ್ಫಾ ಎ.(28) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ವಿವಾಹಪೂರ್ವದಲ್ಲಿ ಪತಿ ಅಬ್ದುಲ್‌ ರಹಮಾನ್‌ ಬೇರೊಂದು ಹುಡುಗಿಯನ್ನು ಪ್ರೀತಿಸುತ್ತಿದ್ದು ಅಲ್ಫಾ ಪ್ರಶ್ನಿಸಿದಕ್ಕೆ ಮಾನಸಿಕ ಹಿಂಸೆ ನೀಡುತ್ತಿದ್ದ ಕಾರಣ ಗಂಡನ ಹಿಂಸೆ ಸಹಿಸಲಾಗದೆ ದುಷ್ಪ್ರೇರಣೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next