Advertisement

ಪ್ರತ್ಯೇಕ ಪ್ರಕರಣ : ಗಾಂಜಾ ಸೇವಿಸುತ್ತಿದ್ದ 9 ಮಂದಿ ಪೊಲೀಸರ ವಶಕ್ಕೆ

02:42 PM Aug 22, 2022 | Team Udayavani |

ಕುಂದಾಪುರ : ಗಂಗೊಳ್ಳಿ, ಕುಂದಾಪುರ ಗ್ರಾಮಾಂತರ, ಕುಂದಾಪುರ ಠಾಣೆ ಎಸ್‌ಐಗಳು ವಿವಿಧೆಡೆ ದಾಳಿ ನಡೆಸಿ ಗಾಂಜಾ ಸೇವಿಸುತ್ತಿದ್ದ 9 ಮಂದಿಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

Advertisement

ಕಾವ್ರಾಡಿ ಗ್ರಾಮದ ಮುಳ್ಳುಗುಡ್ಡೆ ಯಲ್ಲಿ ಗಾಂಜಾ ಸೇವಿಸುತ್ತಿದ್ದ ಆರೋಪಿ ಸುದೀಪ್‌ನನ್ನು ಗ್ರಾಮಾಂತರ ಠಾಣೆ ಎಸ್‌ಐ ಪವನ್‌ ನಾಯಕ್‌ ವಶಕ್ಕೆ ತೆಗೆದುಕೊಂಡಿದ್ದಾರೆ.

ಕೋಡಿ ಬೀಚ್‌ ಸಮೀಪ ಗಾಂಜಾ ಸೇವನೆ ಮಾಡುತ್ತಿದ್ದ ಅಬ್ದುಲ್‌ ರೆಹಮಾನ್‌ನನ್ನು ಎಸ್‌ಐ ಸದಾಶಿವ ಆರ್‌. ಗವರೋಜಿ ಅವರು ವಶಕ್ಕೆ ತೆಗೆದುಕೊಂಡಿದ್ದಾರೆ.

ಹೆಮ್ಮಾಡಿಯಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ನಾಗರಾಜ ಮೊಗವೀರ ನನ್ನು ಪೊಲೀಸ್‌ ಉಪನಿರೀಕ್ಷಕ ಪ್ರಸಾದ ಕುಮಾರ ಕೆ. ವಶಕ್ಕೆ ಪಡೆದುಕೊಂಡಿದ್ದಾರೆ.

ತ್ರಾಸಿ ಬೀಚ್‌ನಲ್ಲಿ
ತ್ರಾಸಿ ಪ್ರವಾಸಿ ಮಂದಿರದ ಬಳಿ ಬೀಚ್‌ನಲ್ಲಿ ಕೆಲವು ಹುಡುಗರು ಕುಳಿತು ಗಾಂಜಾ ಸೇವಿಸುತ್ತಿದ್ದಲ್ಲಿಗೆ ಗಂಗೊಳ್ಳಿ ಠಾಣಾ ಪಿಎಸ್‌ಐ ವಿನಯ ಕೊರ್ಲಹಳ್ಳಿ ದಾಳಿ ಮಾಡಿದ್ದಾರೆ. ಅಲ್ಲಿದ್ದ ಆಶಿಶ್‌, ಅಕ್ಷಿತ್‌, ನಿಯಾಝ್, ಹರ್ಷವರ್ಧನ್‌, ವಿಶಾಲ್‌, ಆದಿತ್ಯ ಬರಂಬೆ ಅವರನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಿದಾಗ ಅವರು ಗಾಂಜಾ ಸೇವಿಸಿದ್ದು ದೃಢಪಟ್ಟಿದೆ. ಪ್ರಕರಣ ದಾಖಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next