Advertisement

Kundapura: ಕೆಲಸವಿಲ್ಲದೆ ಜುಗುಪ್ಸೆ: ಯುವಕ ಆತ್ಮಹತ್ಯೆ

07:01 PM Sep 19, 2024 | Team Udayavani |

ಕುಂದಾಪುರ: ಜಪ್ತಿ ಗ್ರಾಮದ ಆನಂದ ಕುಲಾಲ್‌ ಅವರ ಪುತ್ರ ಕೃಷ್ಣರಾಜ (31) ಸೆ. 18ರಂದು ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Advertisement

ಬಿಕಾಂ ಮುಗಿಸಿ ಬೆಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದ ಅವರು 6 ತಿಂಗಳಿನಿಂದ ಕೆಲಸವಿಲ್ಲದೇ ಊರಿನಲ್ಲಿ ನೆಲೆಸಿದ್ದರು. 3 ತಿಂಗಳಿನಿಂದ ಮಾನಸಿಕವಾಗಿ ನೊಂದಿದ್ದು, ಅದೇ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನಲಾಗಿದೆ.

ತಾಯಿ ಬೇಬಿ ಅವರು ನೀಡಿದ ದೂರಿನಂತೆ ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next