Advertisement

Kundapura:ಅಜ್ಜನ ಅಂತ್ಯಕ್ರಿಯೆಗೆ ಬರುತ್ತಿದ್ದ ಮೊಮ್ಮಗ ಸಾವು

09:56 AM Nov 29, 2023 | Team Udayavani |

ಕುಂದಾಪುರ: ಇಲ್ಲಿನ ಶೇಡಿಮನೆ ಗ್ರಾಮದ ಪಾಟ್ಲಮಕ್ಕಿಯಲ್ಲಿನ ನಾರಾಯಣ ಪೂಜಾರಿ (70) ಅವರು ಮೃತಪಟ್ಟ ಸುದ್ದಿ ಕೇಳಿ
ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಬೈಕಿನಲ್ಲಿ ಆಗಮಿಸುತ್ತಿದ್ದ ಮೊಮ್ಮಗ ಅಪಘಾತದಲ್ಲಿ ಮೃತಪಟ್ಟ ಘಟನೆ ಸೋಮವಾರ ಸಂಭವಿಸಿದೆ. ಮಾನಂಜೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಸಿಸ್ಟೆಂಟ್‌ ಜನರಲ್‌ ಮ್ಯಾನೇಜರ್‌, ಆಜ್ರಿ ಗ್ರಾಮದ ಚೌಕುಳಮಕ್ಕಿ ನಿವಾಸಿ ಚೆನ್ನ ಪೂಜಾರಿ ಹಾಗೂ ಇಂದಿರಾ ಅವರ ಏಕೈಕ ಪುತ್ರ ನಿತೀಶ್‌ ಪೂಜಾರಿ (20) ಮೃತ ಯುವಕ.

Advertisement

ಚಾಮರಾಜನಗರದ ಸರಕಾರಿ ವೈದ್ಯಕೀಯ ಕಾಲೇಜಿನಲ್ಲಿ 2ನೆ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದು ತಾಯಿ ಮನೆಯಲ್ಲಿ ಅಜ್ಜ ಮೃತಪಟ್ಟ ಸುದ್ದಿ ಕೇಳಿ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಆಗಮಿಸುವುದಾಗಿ ಹೇಳಿದ್ದ. ಅವಸರದಲ್ಲಿ ಊರಿಗೆ ಬರುವುದು ಬೇಡ ಎಂದು ಮನೆಯವರು ಹೇಳಿದ್ದರೂ ಎತ್ತಿ ಆಡಿಸಿದ ಅಜ್ಜನ ಮೇಲಿನ ಮೋಹದಿಂದ ತನ್ನ ಬೈಕಿನಲ್ಲಿ ಕುಂದಾಪುರಕ್ಕೆ ಹೊರಟಿದ್ದರು.

ರಸ್ತೆಗೆ ಬಿದ್ದು ಸಾವು
ಈ ಸಂದರ್ಭ ಚಾಮರಾಜನಗರ ತಾಲೂಕಿನ ಪಣ್ಯದಹಂಡಿ ಬಳಿ ರಸ್ತೆ ಮಧ್ಯದ ಹಂಪ್‌ ಅನ್ನು ಗಮನಿಸದೇ ಅಕಸ್ಮಾತ್ತಾಗಿ ರಸ್ತೆಗೆ ಬಿದ್ದು ಮೃತಪಟ್ಟಿದ್ದರು.

ಚಾಮರಾಜನಗರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಳಿಕ ಯುವಕನ ಮೃತದೇಹವನ್ನು ತಂದು ಶೇಡಿ ಮನೆಯಲ್ಲಿ (ತಾಯಿಯ ತಂದೆ ಮನೆ)ಅಜ್ಜ ಮೊಮ್ಮಗನ ಶವಸಂಸ್ಕಾರವನ್ನು ಜತೆಯಾಗಿ ನಡೆಸಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next