Advertisement

Kundapura; ಅಕ್ರಮ ಮರಳು ಸಾಗಾಟ ಪತ್ತೆ

07:02 PM Jan 13, 2024 | Team Udayavani |

ಕುಂದಾಪುರ: ಹಟ್ಟಿಯಂಗಡಿಯ ಸ್ವಾಗತ ಗೋಪುರದ ಬಳಿ ಪಿಕಪ್‌ ವಾಹನದಲ್ಲಿ ಅಕ್ರಮವಾಗಿ ಮರಳನ್ನು ಸಾಗಿಸುತ್ತಿದ್ದುದನ್ನು ಎಸ್‌ಐ ಭೀಮಾಶಂಕರ್‌ ನೇತೃತ್ವದ ಕುಂದಾಪುರ ಗ್ರಾಮಾಂತರ ಠಾಣೆಯ ಪೊಲೀಸರು ಶನಿವಾರ ಪತ್ತೆಹಚ್ಚಿದ್ದಾರೆ.

Advertisement

ಆರೋಪಿ ಕರುಣಾಕರ ಪಿಕಪ್‌ನಲ್ಲಿ ಮರಳನ್ನು ಕಳವು ಮಾಡಿ ಸಾಗಿಸುತ್ತಿದ್ದರು. ಪೊಲೀಸರು ಅಡ್ಡಗಟ್ಟಿದ ಕೂಡಲೇ ವಾಹನವನ್ನು ನಿಲ್ಲಿಸಿ ಆರೋಪಿ ಪರಾರಿಯಾಗಿದ್ದಾನೆ.

ಸುಮಾರು 5 ಸಾವಿರ ರೂ. ಮೌಲ್ಯದ ಮರಳು ಹಾಗೂ ಪಿಕಪ್‌ ವಾಹನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next