Advertisement

Kundapura ಮತ್ತೆ ಗರಿಗೆದರಿದ ನಕ್ಸಲ್‌ ಚಟುವಟಿಕೆ

11:05 PM Feb 05, 2024 | Team Udayavani |

ಕುಂದಾಪುರ: ಕೆಲವು ವರ್ಷಗಳಿಂದ ತಣ್ಣಗಾಗಿದ್ದ ನಕ್ಸಲ್‌ ಚಟುವಟಿಕೆ ಮತ್ತೆ ಉಡುಪಿ ಜಿಲ್ಲೆಯಲ್ಲಿ ಕಾಣಿಸಿಕೊಂಡ ಆತಂಕವಿದೆ.

Advertisement

ಬೈಂದೂರು ತಾಲೂಕಿನ ಮುದೂರು, ಜಡ್ಕಲ್‌, ಬೆಳ್ಕಲ್‌ ಪರಿಸರದಲ್ಲಿ ಈ ಅನುಮಾನ ಹೆಚ್ಚಾಗಿದೆ.

ಕಳೆದ ಎರಡು ತಿಂಗಳಿನಿಂದ ಇಲ್ಲಿ ನಕ್ಸಲ್‌ ಚಟುವಟಿಕೆ ನಡೆಯುತ್ತಿರುವ ಗುಮಾನಿ ಇದ್ದು ಹಸುರು ಯೂನಿಫಾರಂ ಹಾಕಿದ ನಾಲ್ವರ ತಂಡ ವಿವಿಧ ಮನೆಗಳನ್ನು ಭೇಟಿ ಮಾಡುತ್ತಿದೆ ಎಂದು ಗೊತ್ತಾಗಿದೆ. ನಾಲ್ವರ ಪೈಕಿ ಇಬ್ಬರಲ್ಲಿ ಶಸ್ತ್ರಾಸ್ತ್ರಗಳಿದ್ದವು ಎನ್ನಲಾಗಿದೆ. ಕೆಲವು ಮನೆಯವರು ಭೇಟಿಗೆ ಅವಕಾಶ ನೀಡಿಲ್ಲ, ಕೆಲವು ಮನೆಯವರ ಬಳಿ ಕಿಟಕಿಯಿಂದಷ್ಟೇ ಮಾತಾಡಿ ಹೋಗಿದ್ದಾರೆ. ಎರಡು ದಿನಗಳ ಹಿಂದೆಯೂ ಕೆಲ ಮನೆಗಳಿಗೆ ಭೇಟಿ ನೀಡಿದ್ದಾರೆ.

ಮೂರು ದಿನಗಳ ಹಿಂದೆ ಉದಯನಗರ ಬಳಿ ಸಂಚರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕೇರಳದಲ್ಲಿ ನಕ್ಸಲ್‌ ಚಟುವಟಿಕೆ ಗೆ ಪೊಲೀಸರಿಂದ ತೀವ್ರ ಕಾರ್ಯಾಚರಣೆ ಮೂಲಕ ಒತ್ತಡ ಬಂದ ಹಿನ್ನೆಲೆಯಲ್ಲಿ ನಕ್ಸಲರು ಈ ಭಾಗದಲ್ಲಿ ಕಾರ್ಯ ಚಟುವಟಿಕೆ ಆರಂಭಿಸಿರುವ ಅನುಮಾನ ದಟ್ಟ ವಾಗಿದೆ. ಪೊಲೀಸರು ಭೇಟಿ ನೀಡಿ ಮಾಹಿತಿ ಕಲೆ ಹಾಕಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next