Advertisement

Kundapura: ಬೈಕ್‌ಗಳ ಮುಖಾಮುಖಿ ಢಿಕ್ಕಿ ಒಬ್ಬ ಸಾವು, ಇಬ್ಬರು ಗಂಭೀರ

11:53 PM Sep 29, 2024 | Team Udayavani |

ಕುಂದಾಪುರ: ಸರ್ವಿಸ್‌ ರಸ್ತೆಯಲ್ಲಿ ಬೈಕುಗಳು ಮುಖಾಮುಖಿ ಢಿಕ್ಕಿ ಆದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿ, ಮತ್ತೊಬ್ಬ ಗಂಭೀರ ಗಾಯಗೊಂಡ ಘಟನೆ ಶನಿವಾರ ತಡರಾತ್ರಿ ಕುಂದಾಪುರ ನಗರ ಸಮೀಪದ ಹಂಗಳೂರಿನ ನಗು ಪ್ಯಾಲೇಸ್‌ ಎದುರಿನ ಸರ್ವಿಸ್‌ ರಸ್ತೆಯಲ್ಲಿ ನಡೆದಿದೆ.

Advertisement

ಕುಂದಾಪುರ ನಗರದ ಬರೆಕಟ್ಟುವಿನ ಬಾಳೆಹಿತ್ಲು ನಿವಾಸಿ ಪೈಂಟರ್‌ ವೆಂಕಟೇಶ್‌ ಅವರ ಪುತ್ರ ಖಾಸಗಿ ಕಂಪೆನಿಯೊಂದರ ಉದ್ಯೋಗಿ ಶಶಾಂಕ್‌ ಮೊಗವೀರ (22) ಮೃತಪಟ್ಟ ಬೈಕ್‌ ಸವಾರ.

ಶಶಾಂಕ್‌ ಮೊಗವೀರ ರಾತ್ರಿ 11 ಗಂಟೆಯ ವೇಳೆಗೆ ಹಂಗಳೂರಿನ ಪೆಟ್ರೋಲ್‌ ಬಂಕ್‌ ಒಂದರಲ್ಲಿ ಪೆಟ್ರೋಲ್‌ ತುಂಬಿಸಿಕೊಂಡು ಮನೆಗೆ ಹಿಂದಿರುಗುವ ಸಮಯದಲ್ಲಿ ಅಪಘಾತ ನಡೆದಿದೆ. ತತ್‌ಕ್ಷಣ ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅಲ್ಲಿ ಶಶಾಂಕ್‌ ಮರಣ ಹೊಂದಿರುವುದನ್ನು ವೈದ್ಯರು ದೃಢಪಡಿಸಿದರು.

ಇನ್ನೊಂದು ಬೈಕಿನ ಸವಾರ ಮತ್ತು ಹಿಂದೆ ಕುಳಿತಿದ್ದ ಮಹಿಳೆಯೂ ಗಂಭೀರ ಗಾಯಗೊಂಡಿದ್ದು, ಇಬ್ಬರನ್ನೂ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಂದಾಪುರ ನಗರ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಭಾಗದಲ್ಲಿ ಹಿಂದೆಯೂ ಅಪಘಾತಗಳಾಗಿ ಬೈಕ್‌ ಸವಾರ ಸಾವಿಗೀಡಾದ ಘಟನೆ ಸಂಭವಿಸಿತ್ತು. ಸರ್ವಿಸ್‌ ರಸ್ತೆಯಲ್ಲಿ ಕತ್ತಲಿರುವುದೇ ಈ ಘಟನೆಗೆ ಕಾರಣ ಎನ್ನಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next