Advertisement

ಕುಂದಾಪುರ: ಕಾರು ಢಿಕ್ಕಿಯಾಗಿ ವೃದ್ಧ ದಂಪತಿ ಸಾವು

12:45 AM Jan 03, 2023 | Team Udayavani |

ಕುಂದಾಪುರ : ಕಾರು ಢಿಕ್ಕಿಯಾಗಿ ವೃದ್ಧ ದಂಪತಿ ಸಾವನ್ನಪ್ಪಿದ ಘಟನೆ ಕುಂದಾಪುರದ ವಿನಾಯಕ ಚಿತ್ರಮಂದಿರದ ಎದುರಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸೋಮವಾರ ಸಂಜೆ ಸಂಭವಿಸಿದೆ.

Advertisement

ಬ್ರಹ್ಮಾವರ ತಾಲೂಕಿನ ಹಾರಾಡಿ ಗ್ರಾಮದ ಹೊನ್ನಾಳ ನಿವಾಸಿಗಳಾದ ಮಹಾಬಲ ಶೆಟ್ಟಿ (68) ಹಾಗೂ ಅವರ ಪತ್ನಿ ಸರೋಜಾ ಶೆಡ್ತಿ (60) ಸಾವನ್ನಪ್ಪಿದವರು. ಮೃತರು ಇಬ್ಬರು ಪುತ್ರರು ಹಾಗೂ ಪುತ್ರಿಯನ್ನು ಅಗಲಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ ಸಂಬಂಧಿಕರನ್ನು ನೋಡಲು ಅವರು ಕುಂದಾಪುರಕ್ಕೆ ಆಗಮಿಸಿದ್ದರು. ಸಂಬಂಧಿಕರನ್ನು ನೋಡಿ ವಾಪಸು ಬ್ರಹ್ಮಾವರಕ್ಕೆ ತೆರಳುವ ವೇಳೆ ಉಡುಪಿ ಕಡೆಗೆ ಸಂಚರಿಸುತ್ತಿದ್ದ ಕಾರು ಅವರಿಬ್ಬರಿಗೆ ಢಿಕ್ಕಿ ಹೊಡೆದಿದೆ.

ಸಂಬಂಧಿಕರು ರಿಕ್ಷಾದಲ್ಲಿ ಹೋಗಿ ಅಂದಾಗ ಇಲ್ಲ, ಬಸ್ಸಿನಲ್ಲೇ ತೆರಳುವುದಾಗಿ ಹೇಳಿದ್ದು, ಬಸ್ಸಿಗಾಗಿ ಹೆದ್ದಾರಿ ದಾಟುತ್ತಿದ್ದ ವೇಳೆ ಕಾರು ಢಿಕ್ಕಿ ಹೊಡೆದಿದೆ. ಮಹಾಬಲ ಶೆಟ್ಟಿ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಂಭೀರ ಗಾಯಗೊಂಡಿದ್ದ ಸರೋಜಾ ಅವರು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಸಾವನ್ನಪ್ಪಿದ್ದಾರೆ.

ಕುಂದಾಪುರ ಸಂಚಾರ ಪೊಲೀಸ್‌ ಠಾಣೆಯಲ್ಲಿ ಕಾರು ಚಾಲಕ ಮಂಜುನಾಥನ ವಿರುದ್ಧ ಪ್ರಕರಣ ದಾಖಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next