Advertisement

Kundapura: ಬೀಜಾಡಿ ಸಮುದ್ರ ತೀರದಲ್ಲಿ ಅಪರಿಚಿತ ಶವ ಪತ್ತೆ

11:33 PM Jul 31, 2024 | Team Udayavani |

ಕುಂದಾಪುರ: ಕೋಟೇಶ್ವರ ಸಮೀಪದ ಬೀಜಾಡಿ ಸಮುದ್ರದಲ್ಲಿ ಸುಮಾರು 35 ವರ್ಷದ ಅಪರಿಚಿತ ಯುವಕನ ಶವವೊಂದು ತೇಲಿ ಬಂದಿದೆ.

Advertisement

ಗಂಗೊಳ್ಳಿ ಕಡೆಯಿಂದ ಕೋಟೇಶ್ವರ ಕಡೆಗೆ ಸಮುದ್ರದಲ್ಲಿ ತೇಲಿ ಬಂದ ಅಪರಿಚಿತ ಯುವಕನ ಮೃತದೇಹ ಬಂದಿದ್ದು, ಸಮುದ್ರದಲ್ಲಿ ತೇಲಿ ಬರುತ್ತಿರುವ ಶವವನ್ನು ಗಮನಿಸಿದ ಸ್ಥಳೀಯರು ಕೊಡಲೇ ಪಂಚಾಯತ್‌ ಹಾಗೂ ಪೊಲೀಸರಿಗೆ ಮಾಹಿತಿ ನೀಡಿ ಸ್ಥಳೀಯರ ಕಾರ್ಯಾಚರಣೆಯಿಂದ ಶವವನ್ನು ದಡ ಸೇರಿಸಲಾಯಿತು.

ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಶವವನ್ನು ಕುಂದಾಪುರ ಶವಗಾರಕ್ಕೆ ಸಾಗಿಸಿದರು. ವಾರಸುದಾರರು ಕುಂದಾಪುರ ಪೊಲೀಸ್‌ ಠಾಣೆಯನ್ನು ಸಂಪರ್ಕಿಸ ಬೇಕಾಗಿ ಕೋರಲಾಗಿದೆ.

ವ್ಯಕ್ತಿ ಆತ್ಮಹತ್ಯೆ
ಗಂಗೊಳ್ಳಿ: ಹೊಸಾಡು ಗ್ರಾಮದ ರಮೇಶ್‌ (54) ಅವರು ಕಾಯಿಲೆಯಿಂದ ಬಳಲುತ್ತಿದ್ದು, ಇದ ರಿಂದ ಮನನೊಂದು ಜೀವನದಲ್ಲಿ ಜುಗುಪ್ಸೆಗೊಂಡು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next