Advertisement

ವೈಯಕ್ತಿಕ ದ್ವೇಷ: ವಾಹನ ಹರಿಸಿ ಓರ್ವನ ಕೊಲೆ ; ಕುಂದಾಪುರದ ಯಡಮೊಗೆ ಯಲ್ಲಿ ನಡೆದ ಘಟನೆ

12:12 AM Jun 06, 2021 | Team Udayavani |

ಕುಂದಾಪುರ : ವೈಯಕ್ತಿಕ ಜಗಳವೊಂದು ಓರ್ವನ ಕೊಲೆಯಲ್ಲಿ ಅಂತ್ಯವಾದ ಘಟನೆ ಕುಂದಾಪುರದ ಯಡಮೊಗೆ ಯಲ್ಲಿ ಶನಿವಾರ ರಾತ್ರಿ ಸಂಭವಿಸಿದೆ. ಯಡಮೊಗೆಯ ಹೊಸಬಾಳು ನಿವಾಸಿ ಉದಯ ಗಾಣಿಗ (45) ಕೊಲೆಯಾದ ವ್ಯಕ್ತಿ.

Advertisement

ಯಡಮೊಗೆಯ ಗ್ರಾ.ಪಂ. ಅಧ್ಯಕ್ಷ ಪ್ರಾಣೇಶ್‌ ಯಡಿಯಾಳ್‌ ವಿರುದ್ಧ ಉದಯ ಕುಟುಂಬಸ್ಥರು ಕೊಲೆ ಆರೋಪ ಹೊರಿಸಿದ್ದಾರೆ.

ಘಟನೆ ಹೇಗಾಯಿತು?
ರಾತ್ರಿ 8 ಗಂಟೆ ಸುಮಾರಿಗೆ ತನ್ನ ಮನೆಯ ಎದುರಿನ ರಸ್ತೆಯ ಮೇಲೆ ನಿಂತಿದ್ದ ಉದಯ ಅವರ ಮೇಲೆ ಪ್ರಾಣೇಶ್‌ ಯಡಿಯಾಳ ಏಕಾಏಕಿಯಾಗಿ ಕಾರು ಚಲಾಯಿಸಿದ್ದಾನೆ. ಉದಯ ಗಂಭೀರವಾಗಿ ಗಾಯಗೊಂಡರು. ಅವರನ್ನು ಸ್ಥಳೀಯರು 108 ಆ್ಯಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಕೊಂಡೊಯ್ಯುವ ಯತ್ನ ನಡೆಸಿದರಾದರೂ ದಾರಿ ಮಧ್ಯೆಯೇ ಕೊನೆಯುಸಿರೆಳೆದರು.

ಇದನ್ನೂ ಓದಿ ;ರೋಹಿಣಿ ಸಿಂಧೂರಿ, ಶಿಲ್ಪಾನಾಗ್ ಸೇರಿ 7 ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಸರ್ಕಾರದ ಆದೇಶ

ಇದು ಅಪಘಾತವಲ್ಲ.. ಮೇಲ್ನೋಟಕ್ಕೆ ಕೊಲೆಯೆಂದು ತಿಳಿದು ಬರುತ್ತಿದ್ದು, ಮೃತನ ಕುಟಂಬಸ್ಥರು ಸಹ ಸಂಶಯ ವ್ಯಕ್ತಪಡಿಸಿದ್ದಾರೆ ಎಂದು ಪೊಲೀಸ್‌ ಮೂಲಗಳಿಂದ ತಿಳಿದು ಬಂದಿದೆ.

Advertisement

ಗ್ರಾ.ಪಂ.ನಲ್ಲಿ ನಡೆಯುವ ಅನ್ಯಾಯ, ಅಕ್ರಮಗಳ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಉದಯ ಗಾಣಿಗ ಬರಹ ಪ್ರಕಟಿಸಿ ಪ್ರಶ್ನಿಸುತ್ತಿದ್ದರು ಎನ್ನಲಾಗುತ್ತಿದ್ದು, ಇದರಿಂದಾಗಿಯೇ ಗ್ರಾ.ಪಂ. ಅಧ್ಯಕ್ಷ ಪ್ರಾಣೇಶ್‌ ಹಾಗೂ ಉದಯ ಮಧ್ಯೆ ವೈಯಕ್ತಿಕ ದ್ವೇಷ ಮೂಡಿತ್ತು ಎನ್ನಲಾಗಿದೆ.

ಉದಯ್‌ ವಿವಾಹಿತರಾಗಿದ್ದು, ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ರಸಗೊಬ್ಬರ ಅಂಗಡಿಯನ್ನು ನಡೆಸುತ್ತಿದ್ದ ಅವರು ಕೃಷಿಕರಾಗಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next