Advertisement

Kunigal: ಟ್ರ್ಯಾಕ್ಟರ್ ಹಿಂಬದಿಗೆ ಡಿಕ್ಕಿ ಹೊಡೆದ ದ್ವಿಚಕ್ರ ವಾಹನ; ಸವಾರ ಸ್ಥಳದಲ್ಲೇ ಸಾವು

09:53 AM Aug 16, 2024 | Team Udayavani |

ಕುಣಿಗಲ್: ಚಲಿಸುತ್ತಿದ್ದ ಟ್ರ್ಯಾಕ್ಟರ್ ಹಿಂಬದಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸವಾರ ಸ್ಥಳದಲ್ಲೇ ಮೃತಪಟ್ಟು ಮತ್ತೋರ್ವ ಗಾಯಗೊಂಡಿರುವ ಘಟನೆ ತಾಲೂಕಿನ ರಾಜ್ಯ ಹೆದ್ದಾರಿ 33 ಸಂತೇಮಾವತ್ತೂರು ಕೆಂಪನಹಳ್ಳಿ ಬಳಿ ಆ.16ರ ಶುಕ್ರವಾರ ಸಂಭವಿಸಿದೆ.

Advertisement

ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕು ಕೋಪ್ಪ ಪೋಸ್ಟ್ ನಂಬಿನಾಯಕಹಳ್ಳಿ ಗ್ರಾಮದ ದರ್ಶನ್ (24) ಮೃತಪಟ್ಟಿದ್ದು, ಹಿಂಬದಿ ಸವಾರ ಚಂದನ್( 22) ಗಾಯಗೊಂಡಿದ್ದು ಆಸ್ಪತ್ರೆ ಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ದರ್ಶನ್ ಹಾಗೂ ಚಂದನ್ ತಮ್ಮ ಗ್ರಾಮದಿಂದ  ದ್ವಿಚಕ್ರ ವಾಹನದಲ್ಲಿ ಕುಣಿಗಲ್ ಕಡೆ ಬರುತ್ತಿದ್ದ ಸಂದರ್ಭ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.

ಹುಲಿಯೂರುದುರ್ಗ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next