Advertisement

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

12:17 AM Apr 30, 2024 | Team Udayavani |

ಕುಣಿಗಲ್ : ರಸ್ತೆ ಬದಿಯಲ್ಲಿ ಬೈಕ್ ತಳ್ಳಿಕೊಂಡು ಹೋಗುತ್ತಿದ್ದ ಯುವಕರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲೂಕಿನ ಎಡಿಯೂರು ಹೋಬಳಿ ರಾಷ್ಟ್ರೀಯ ಹೆದ್ದಾರಿ 75 ರ ನಾಗೇಗೌಡನಪಾಳ್ಯ ಬಳಿ ಸೋಮವಾರ ಸಂಭವಿಸಿದೆ.

Advertisement

ತಾಲೂಕಿನ ಹುಲಿಯೂರುದುರ್ಗ ಹೋಬಳಿ ಹಂಗರಹಳ್ಳಿ ಗ್ರಾಮದ ಉಮೇಶ (25) ಮಂಡ್ಯ ಜಿಲ್ಲೆ ಮದ್ದೂರು ತಾಲೂಕು ದೇವೇಗೌಡನದೊಡ್ಡಿಯ ಅವಿನಾಶ್ (25) ಮೃತ ದುರದೈವಿಗಳು.

ಉಮೇಶ್, ಅವಿನಾಶ್ ಇಬ್ಬರು ಸಂಬಂಧಿಕರಾಗಿದ್ದು, ಈ ಇಬ್ಬರು ಯುವಕರು ಸೋಮವಾರ ಹಂಗರಹಳ್ಳಿ ಗ್ರಾಮದಿಂದ ಬೈಕ್‌ನಲ್ಲಿ ತಾಲೂಕಿನ ಪ್ರಸಿದ್ದ ಎಡಿಯೂರು ಸಿದ್ದಲಿಂಗೇಶ್ವರಸ್ವಾಮಿ ದೇವಾಲಯಕ್ಕೆ ತೆರಳುತ್ತಿದ್ದರು, ಆದರೆ ಮಾರ್ಗ ಮಧ್ಯ ಬೈಕ್‌ನ ಪೆಟ್ರೋಲ್ ಖಾಲಿಯಾದ ಕಾರಣ ಉಮೇಶ್ ಹಾಗೂ ಅವಿನಾಶ್ ಬೈಕ್‌ಗೆ ಪೆಟ್ರೋಲ್ ಹಾಕಿಸಿಕೊಳ್ಳಲು ಬೈಕ್ ಅನ್ನು ರಸ್ತೆ ಬದಿಯಲ್ಲಿ ತೆಳ್ಳಿಕೊಂಡು ಹೋಗುತ್ತಿದ್ದ ವೇಳೆ, ಬೆಂಗಳೂರು ಕಡೆಯಿಂದ ಹಾಸನ ಕಡೆಗೆ ಹೋಗುತ್ತಿದ್ದ ಕಾರು ಬೈಕ್ ಹಿಂಬದಿಗೆ ಡಿಕ್ಕಿ ಹೊಡೆದ ಕಾರಣ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ಅಮೃತ್ತೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next