Advertisement

ಪಟಾಕಿ ಸಿಡಿದು ಸಹಕಾರಿ ಸಚಿವ ಕೆ.ಎನ್.ಆರ್. ಕಣ್ಣಿಗೆ ಗಾಯ: ಆಸ್ಪತ್ರೆ ಯಲ್ಲಿ ಚಿಕಿತ್ಸೆ

08:13 AM Jun 11, 2023 | Team Udayavani |

ಕುಣಿಗಲ್: ಸಹಕಾರಿ ಸಚಿವ ಕೆ.ಎನ್ ರಾಜಣ್ಣ ಅವರ ಕಣ್ಣಿಗೆ ಪಟಾಕಿ ಸಿಡಿದು ಗಾಯಗೊಂಡ ಘಟನೆ ಪಟ್ಟಣದ ಹುಚ್ಚಮಾಸ್ತಿಗೌಡ ವೃತ್ತದಲ್ಲಿ ಜೂ.11ರ ಭಾನುವಾರ ಬೆಳಗ್ಗೆ ನಡೆದಿದೆ.

Advertisement

ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಕೆ.ಎನ್. ರಾಜಣ್ಣ ಅವರು ಭಾನುವಾರ  ಶಕ್ತಿ ಯೋಜನೆಗೆ ಚಾಲನೆ ನೀಡಲು ತುಮಕೂರಿನಿಂದ ಕುಣಿಗಲ್ ಮಾರ್ಗವಾಗಿ ಹಾಸನಕ್ಕೆ ತೆರಳುತ್ತಿದ್ದರು.

ಈ ಬಗ್ಗೆ ವಿಷಯ ತಿಳಿದ ಕೆಎನ್ ಆರ್ ಅಭಿಮಾನಿಗಳು, ಹಿತೈಷಿಗಳು, ಕಾಂಗ್ರೆಸ್ ಕಾರ್ಯಕರ್ತರು ಕುಣಿಗಲ್ ಪಟ್ಟಣದ ಹುಚ್ಚಮಾಸ್ತಿಗೌಡ ಸರ್ಕಲ್ ಬಳಿ ಕಾರನ್ನು ತಡೆದು ಪುಪ್ಪ ಮಾಲೆ‌ಹಾಕಿ ಅಭಿನಂದಿಸಿ, ಬಳಿಕ ಸಮೀಪದಲ್ಲೇ ಪಟಾಕಿ ಹಚ್ಚಿ ಸಿಡಿಸಿದರು. ಈ ಸಂದರ್ಭ ಸಚಿವ ರಾಜಣ್ಣ ಧರಿಸಿದ ಕನ್ನಡಕ ತೆಗೆಯುವುದು ಹಾಗೂ ಪಟಾಕಿ ಸಿಡಿಯುವುದು ಒಂದೇ ಸಮಯವಾಗಿತ್ತು. ಪಟಾಕಿಯ ಕಿಡಿ ನೇರವಾಗಿ ಬಲ ಕಣ್ಣಿಗೆ ಬಂದು ಸಿಡಿಯಿತು. ತಕ್ಷದ ಇಲ್ಲಿನ ಖಾಸಗಿ ಆಸ್ಪತ್ರೆಯೊಂದಕ್ಕೆ ತೆರಳಿ ನೇತ್ರ ತಜ್ಞ ಡಾ.ರವಿಕುಮಾರ್ ಅವರಿಂದ ಚಿಕಿತ್ಸೆ ಪಡೆದು, ಬಳಿಕ ಹಾಸನಕ್ಕೆ ತೆರಳಿದರು.

Advertisement

Udayavani is now on Telegram. Click here to join our channel and stay updated with the latest news.

Next