Advertisement

Kunigal: ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಮೂವರಿಗೆ ಗಾಯ

12:51 PM Aug 12, 2023 | Team Udayavani |

ಕುಣಿಗಲ್: ಪ್ರತ್ಯೇಕ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟು ಮೂವರು ಗಾಯಗೊಂಡಿರುವ ಘಟನೆ ತಾಲೂಕಿನ ಡಿ.ಹೊಸಹಳ್ಳಿ ಹಾಗೂ ಎಡಿಯೂರು ದೇವಾಲಯದ ಸಮೀಪ ಆ.12ರ ಶನಿವಾರ ನಡೆದಿದೆ.

Advertisement

ತಾಲೂಕಿನ ಹುಲಿಯೂರುದುರ್ಗ ಹೋಬಳಿ ಎಂ.ಬೊಮ್ಮನಹಳ್ಳಿ ಗ್ರಾಮದ ನಿವಾಸಿ ನಂಜುಡಯ್ಯ (50), ಹುತ್ರಿದುರ್ಗ ಹೋಬಳಿ ವಾಸಿ ಪ್ರಿಯಾಂಕ (25) ಪ್ರತ್ಯೇಕ ಅಪಘಾತದಲ್ಲಿ ಮೃತಪಟ್ಟ ದುರ್ಧೈವಿಗಳು.

ಬೈಕ್‌ಗೆ ಕ್ಯಾಂಟರ್ ಡಿಕ್ಕಿ:  ನಂಜುಡಯ್ಯ ಎಂಬವರು ಕೆಲಸದ ನಿಮಿತ್ತ ತನ್ನ ಸ್ವ ಗ್ರಾಮ ಎಂ.ಬೊಮ್ಮನಹಳ್ಳಿ ಗ್ರಾಮದಿಂದ ಬೈಕ್‌ನಲ್ಲಿ ಹುಲಿಯೂರುದುರ್ಗಕ್ಕೆ ಹೋಗಿ ತನ್ನ ಗ್ರಾಮಕ್ಕೆ ವಾಪಸ್ಸಾಗುತ್ತಿದ್ದ ವೇಳೆ ಕುಣಿಗಲ್ ಕಡೆಯಿಂದ ಮೈಸೂರು ಕಡೆಗೆ ಹೋಗುತ್ತಿದ್ದ ಟೆಂಪೋವೊಂದು ಡಿಕ್ಕಿ ಹೊಡೆದ ಪರಿಣಾಮ ಈ ಅವಘಡ ಸಂಭವಿಸಿದೆ ಎನ್ನಲಾಗಿದ್ದು, ಸ್ಥಳಕ್ಕೆ ಹುಲಿಯೂರುದುರ್ಗ ಪಿಎಸ್‌ಐ ಸುನೀಲ್‌ ಕುಮಾರ್ ಭೇಟಿ ನೀಡಿ, ತನಿಖೆ ಕೈಗೊಂಡಿದ್ದಾರೆ.

ಬೈಕ್‌ಗೆ ಟ್ರ್ಯಾಕ್ಟರ್ ಡಿಕ್ಕಿ: ಮತ್ತೊಂದು ಘಟನೆಯಲ್ಲಿ ತಾಲೂಕಿನ ಹುತ್ರಿದುರ್ಗ ಹೋಬಳಿ ಯಲಿಯೂರು ಗ್ರಾಮದ ನವೀನ್‌ ಕುಮಾರ್ ಹಾಗೂ ಆತನ ಹೆಂಡತಿ ಮತ್ತು ಮಕ್ಕಳು ಬೈಕ್‌ನಲ್ಲಿ ಎಡಿಯೂರು ಶ್ರೀ ಸಿದ್ದಲಿಂಗೇಶ್ವರ  ದೇವಾಲಯಕ್ಕೆ ಹೋಗಿ ದೇವರ ದರ್ಶನ ಮಾಡಿ ಕುಣಿಗಲ್ ಕಡೆಗೆ ಬರುತ್ತಿರುವಾಗ ಎಡಿಯೂರು  ದೇವಾಲಯದ ಬಳಿ ಟ್ಯ್ರಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ನವೀನ್‌ ಕುಮಾರ್‌ ನ ಹೆಂಡತಿ ಪ್ರೀಯಾಂಕ ಸ್ಥಳದಲ್ಲೇ ಮೃತಪಟ್ಟು, ನವೀನ್‌ಕುಮಾರ್ ಹಾಗೂ ಆತನ ಇಬ್ಬರು ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಅಮೃತೂರು ಪೊಲೀಸರು ಸ್ಥಳಕ್ಕೆ ಬೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next