Advertisement

ಕುಣಿಗಲ್: ಬೈಕ್‌ಗೆ ಕಾರು ಢಿಕ್ಕಿಯಾಗಿ ಯುವಕ ಸಾವು

08:34 PM Aug 16, 2022 | Team Udayavani |

ಕುಣಿಗಲ್: ಬೈಕ್‌ಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಮೃತಪಟ್ಟಿರುವ ಘಟನೆ ತಾಲೂಕಿನ ರಾಜ್ಯ ಹೆದ್ದಾರಿ 33 ರ ಟಿ.ಎಂ ರಸ್ತೆ ಗವಿಮಠ ಬಳಿ ಮಂಗಳವಾರ ನಡೆದಿದೆ.

Advertisement

ಕುಣಿಗಲ್ ಪಟ್ಟಣದ ಮದ್ದೂರು ರಸ್ತೆ ವಾಸಿ ಮೊಸೀನ್ (23) ಮೃತ ಯುವಕ

ಘಟನೆ ವಿವರ: ಮೊಸೀನ್ ಗವಿಮಠ ಬಳಿ ಆಟೋ ಎಲೆಕ್ಟ್ರಿಷಿಯನ್ ಅಂಗಡಿ ಇಟ್ಟುಕೊಂಡು ಕೆಲಸ ಮಾಡುತ್ತಿದ್ದು, ಎಂದಿನಂತೆ   ಸಂಜೆ ಅಂಗಡಿಯ ಬಾಗಿಲು ಹಾಕಿಕೊಂಡು ದ್ವಿಚಕ್ರ ವಾಹನದಲ್ಲಿ ಮನೆಗೆ ತೆರಳುತ್ತಿದ್ದ ವೇಳೆ, ಮದ್ದೂರು ಕಡೆಯಿಂದ ಕುಣಿಗಲ್ ಕಡೆಗೆ ಬರುತ್ತಿದ್ದ ಕಾರು ಬೈಕ್‌ನ ಹಿಂಬದಿಗೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ಪರಿಣಾಮ ಮೊಸೀನ್ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.  ಕಾರು ಚಾಲಕ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ:‌ವಿಪರೀತ ಕುಡಿತದ ಚಟ; ಕಿಡ್ನಿ ವೈಫಲ್ಯದಿಂದ ಖಿನ್ನತೆಗೊಳಗಾಗಿ ವ್ಯಕ್ತಿ ಆತ್ಮಹತ್ಯೆ

ಘಟನೆ ಕುಣಿಗಲ್‌ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ತನಿಖೆ ಕೈಗೊಂಡಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next