Advertisement

Kunigal: ಹೆಜ್ಜೇನು ದಾಳಿಗೆ ರೈತ ಬಲಿ

07:07 PM Feb 14, 2024 | Team Udayavani |

ಕುಣಿಗಲ್ : ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ಹೆಜ್ಜೇನು ದಾಳಿ ನಡೆಸಿದ ಕಾರಣ ರೈತರೊಬ್ಬರು ಮೃತಪಟ್ಟಿರುವ ಘಟನೆ ತಾಲೂಕಿನ ಕಸಬಾ ಹೋಬಳಿ ಮೋದೂರು ಗ್ರಾಮದಲ್ಲಿ ಬುಧವಾರ ನಡೆದಿದೆ.

Advertisement

ಮೋದೂರು ಗ್ರಾಮದ ರೈತ ಮೂಗೂರಯ್ಯ (65) ಮೃತ ದುರ್ದೈವಿ. ಮೂಗೂರಯ್ಯ ಎಂದಿನಂತೆ ತನ್ನ ತೋಟದಲ್ಲಿ ವ್ಯವಸಾಯ ಮಾಡುತ್ತಿದ್ದ ವೇಳೆ ಹೆಜ್ಜೇನು ದಾಳಿ ಮಾಡಿದೆ. ಕಡಿತದಿಂದ ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಗ್ರಾಮಸ್ಥರು ಪಟ್ಟಣದ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದರೂ ಫಲಕಾರಿಯಾಗದೇ ಮೃತಪಟ್ಟಿದ್ದಾರೆ, ಹುಲಿಯೂರುದುರ್ಗ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next