Advertisement

ಕುಣಿಗಲ್ : ಬಸ್ ಢಿಕ್ಕಿಯಾಗಿ ಪಾದಚಾರಿ ಸಾವು

10:41 PM Sep 16, 2022 | Team Udayavani |

ಕುಣಿಗಲ್ : ಖಾಸಗಿ ಬಸ್ ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶುಕ್ರವಾರ ರಾತ್ರಿ ತಾಲೂಕಿನ ಕೊತ್ತಗೆರೆ ಹೋಬಳಿ ಚಿಕ್ಕಮಲಳವಾಡಿ ಗ್ರಾಮದಲ್ಲಿ ನಡೆದಿದೆ.

Advertisement

ಚಿಕ್ಕಮಲಳವಾಡಿ ಗ್ರಾಮದ ಕುಮಾರ್ (45) ಮೃತ ದುರ್ದೈವಿ. ಚಿಕ್ಕಮಲಳವಾಡಿ ಗ್ರಾಮದ ಬಸ್ ನಿಲ್ದಾಣದಿಂದ ತನ್ನ ಮನೆಗೆ ನಡೆದುಕೊಂಡು ಹೊಗುತ್ತಿರಬೇಕಾದರೆ ತುಮಕೂರು ಕಡೆಯಿಂದ ಕುಣಿಗಲ್ ಕಡೆಗೆ ಹೊಗುತ್ತಿದ್ದ ಖಾಸಗಿ ಬಸ್ ಢಿಕ್ಕಿ ಹೊಡೆದ ಪರಿಣಾಮ ಕುಮಾರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಕುಣಿಗಲ್ ಪೊಲೀಸರು ಸ್ಥಳಕ್ಕೆ ಭೇಟಿ‌ ನೀಡಿ ತನಿಖೆ ಕೈಗೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next