Advertisement

Kunigal: ಪ್ರತ್ಯೇಕ ಅಪಘಾತ; ಇಬ್ಬರು ಸಾವು

05:34 PM May 17, 2024 | Team Udayavani |

ಕುಣಿಗಲ್ : ಪ್ರತ್ಯೇಕ ಅಪಘಾತದಲ್ಲಿ ಇಬ್ಬರು ಮೃತಪಟ್ಟಿರುವ ಘಟನೆ ತಾಲೂಕಿನ ಕುಣಿಗಲ್ ಹಾಗೂ ಹುಲಿಯೂರುದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Advertisement

ಕುಣಿಗಲ್ ತಾಲೂಕು ಕೊತ್ತಗೆರೆ ಹೋಬಳಿ ಭಕ್ತರಹಳ್ಳಿ ಗ್ರಾಮದ ಅಂಜನಪ್ಪ (55) ರಾಮನಗರ ಜಿಲ್ಲೆ ಚನ್ನಪಟ್ಟಣ ಪಟ್ಟಣದ ಮಂಗಳಪೇಟೆಯ ವಾಸಿ ಪ್ರಜ್ವಲ್ (30) ಮೃತ ದುರ್ಧೈವಿಗಳು.

ಪಾದಾಚಾರಿಗೆ ಬೈಕ್ ಢಿಕ್ಕಿ: ಭಕ್ತಹಳ್ಳಿ ಗ್ರಾಮದ ಅಂಜನಪ್ಪ ಭಕ್ತರಹಳ್ಳಿ ಗೇಟ್‌ನಿಂದ ತನ್ನ ಮನೆಗೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಭಕ್ತರಹಳ್ಳಿ ಗೇಟ್ ನಿಂದ ಸಿಂಗೋನಹಳ್ಳಿ ಕಡೆಗೆ ಹೋಗುತ್ತಿದ್ದ ಬೈಕ್ ಅಂಜನಪ್ಪನಿಗೆ ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಕುಣಿಗಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಬೈಕ್‌ಗೆ ಅಪರಿಚಿತ ವಾಹನ ಢಿಕ್ಕಿ: ಚನ್ನಪಟ್ಟಣದ ಪ್ರಜ್ವಲ್ ಹಾಗೂ ಮನೋಜ್  ಬೆಳ್ಳೂರಿನಿಂದ ತಮ್ಮ ಊರು ಚನ್ನಪಟ್ಟಣಕ್ಕೆ ಬೈಕ್‌ನಲ್ಲಿ ಹೋಗುತ್ತಿದ್ದ ವೇಳೆ ಅಪರಿಚಿತ ವಾಹನವೊಂದು ಬೈಕ್‌ಗೆ ಢಿಕ್ಕಿ ಹೊಡೆದಿದೆ. ಪರಿಣಾಮ ಪ್ರಜ್ವಲ್ ಸ್ಥಳದಲ್ಲೇ ಮೃತಪಟ್ಟು, ಮನೋಜ್ ತೀವ್ರವಾಗಿ ಗಾಯಗೊಂಡಿದ್ದಾನೆ.

Advertisement

ಚಾಲಕ ವಾಹನವನ್ನು ನಿಲ್ಲಿಸದೇ ಪರಾರಿಯಾಗಿದ್ದು ಹುಲಿಯೂರುದುರ್ಗ ಪೊಲೀಸರು  ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next