Advertisement

Kunigal:ಕಾರು ಪಲ್ಟಿಯಾಗಿ ವಿದ್ಯಾರ್ಥಿನಿ ಮೃತ್ಯು, ಮೂವರಿಗೆ ಗಾಯ

10:10 PM Aug 31, 2023 | Team Udayavani |

ಕುಣಿಗಲ್ : ಕಾರು ಪಲ್ಟಿ ಹೊಡೆದು ಕಾಲೇಜು ವಿದ್ಯಾರ್ಥಿನಿಯೋರ್ವಳು ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಾಯಗೊಂಡಿರುವ ಘಟನೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75 ಸಿದ್ದಾಪುರ ಅವರಗೆರೆ ಮಧ್ಯ ಗುರುವಾರ ರಾತ್ರಿ ನಡೆದಿದೆ.

Advertisement

ಬೆಂಗಳೂರು ಮೂಲದವರು ಎನ್ನಲಾದ ಐಶ್ವರ್ಯ (20) ಮೃತ ದುರ್ದೈವಿ. ಐಶ್ವರ್ಯ ಮತ್ತು ಆಕೆಯ ಸ್ನೇಹಿತರೊಂದಿಗೆ ಹಾಸನ ಕಡೆಗೆ ಹೋಗಿ ಮತ್ತೆ ಬೆಂಗಳೂರಿಗೆ ವಾಪಸಾಗುತ್ತಿರಬೇಕಾದರೆ ಕಾರು ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ರಸ್ತೆಗೆ ಉರುಳಿ ಬಿದ್ದ ಕಾರಣ ಅವಘಡ ಸಂಭವಿಸಿದೆ ಎನ್ನಲಾಗಿದೆ. ಘಟನೆಯಲ್ಲಿ ಮೂವರು ಗಾಯಗೊಂಡಿದ್ದು ಅವರ ಹೆಸರು ತಿಳಿದು ಬಂದಿಲ್ಲ, ಅಮೃತೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next