Advertisement

Kunigal:ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟದ ಇಬ್ಬರು ಗಾಯಾಳುಗಳು ಸಾವು

09:14 AM May 22, 2024 | Team Udayavani |

ಕುಣಿಗಲ್: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಇಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ಬುಧವಾರ ಬೆಳಗ್ಗೆ ನಡೆದಿದೆ.

Advertisement

ಸ್ಪೋಟದಲ್ಲಿ ಕುಣಿಗಲ್ ಪಟ್ಟಣ ಕೋಟೆ ಪ್ರದೇಶದ ಸಂತೆ ಮೈದಾನ ನಿವಾಸಿ ಶಿವಣ್ಣ( 45 ), ಕುಶಾಲ್ (11) ಮೃತ ದುರ್ದೈವಿಗಳು.

ಘಟನೆ ವಿವರ
ರವಿಕುಮಾರ್ ಖಾರಪುರಿ ವ್ಯಾಪಾರಿಯಾಗಿದ್ದು, ಪುರಿಯನ್ನು ಹುರಿಯಲು ಹಾಗೂ ಅಡುಗೆ ಮಾಡಲು ನಾಲ್ಕು ಕೆ.ಜಿ ಗ್ಯಾಸ್ ಸಿಲಿಂಡರ್ ಸ್ಟವ್ ಬಳಸುತ್ತಿದ್ದರು, ರವಿಕುಮಾರ್ ಹೆಂಡತಿ ಶೃತಿ ಆಕೆಯ ಮಗಳು ಹೇಮಲತಾಳನ್ನು ಟ್ಯೂಷನ್ ಗೆ ಬಿಡಲು ಶುಕ್ರವಾರ ಮೇ (17) ಮನೆಯಿಂದ ಹೊರ ಬರುತ್ತಿದಂತೆ ಮನೆಯಲ್ಲಿ ಸ್ಪೋಟದ ಶಬ್ದ ಕೇಳಿ ಬಂದಿತ್ತು. ಮನೆ ಒಳಗೆ ಹೋಗಿ ನೋಡಲಾಗಿ ಸಿಲಿಂಡರ್ ಸ್ಪೋಟಗೊಂಡು ಮನೆಯಲ್ಲಿ ಬೆಂಕಿ ಹತ್ತಿಕೊಂಡು ಉರಿಯುತ್ತಿತ್ತು. ಆ ವೇಳೆ ಮನೆಯಲ್ಲಿ ಇದ್ದ ಕುಶಾಲ್ ಹಾಗೂ ಶೃತಿ, ಹೇಮಲತಾಗೆ ಗಂಭೀರ ಸ್ವರೂಪದ ಗಾಯವಾಗಿತ್ತು.

ನೋಡಲು ಬಂದವರಿಗೂ ಗಾಯ
ಸಿಲಿಂಡರ್ ಸ್ಪೋಟದ ಶಬ್ದವನ್ನು ಕೇಳಿದ ಅಕ್ಕ ಪಕ್ಕದ ಮನಯವರಾದ ಶಿವಣ್ಣ, ಮಂಜಮ್ಮ, ಹಾಗೂ ಸಮೀನಾ ಅವರಿಗೂ ತೀವ್ರವಾಗಿ ಗಾಯಗೊಂಡಿದ್ದರು. ಈ ವೇಳೆ ಎರಡು ಮನೆಗೆ ಹಾನಿ ಉಂಟಾಗಿತ್ತು.

ತೀವ್ರವಾಗಿ ಗಾಯಗೊಂಡ ಕುಶಾಲ್, ಶಿವಣ್ಣ, ಮಂಜಮ್ಮ, ಹೇಮಲತಾ, ಸಮೀನಾ ಅವರಿಗೆ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರು ವಿಕ್ಟೋರಿಯಾ ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು ಚಿಕಿತ್ಸೆ ಫಲಕಾರಿಯಾಗದೇ ಶಿವಣ್ಣ, ಕುಶಾಲ್ ಬುಧವಾರ ಮುಂಜಾನೆ ಮೃತಪಟ್ಟಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next