Advertisement

ಕುಣಿಗಲ್‌: ಪ್ರತ್ಯೇಕ ಪ್ರಕರಣ ಇಬ್ಬರು ನೇಣುಬಿಗಿದು ಆತ್ಮಹತ್ಯೆ

05:39 PM May 27, 2022 | Team Udayavani |

ಕುಣಿಗಲ್: ಎರಡು ಪ್ರತ್ಯೇಕ ಪ್ರಕರಣದಲ್ಲಿ ಇಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿರುವ ಘಟನೆ ಕುಣಿಗಲ್ ಪಟ್ಟಣದಲ್ಲಿ ಶುಕ್ರವಾರ ನಡೆದಿದೆ.

Advertisement

ಪಟ್ಟಣದ ಉಪ್ಪಾರ ಬೀದಿ ನಿವಾಸಿ ಅಶ್ವಥ್ (42) ತನ್ನ ಮನೆಯಲ್ಲಿ ಶಾಲಿನಿಂದ ಕುತ್ತಿಗೆ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮತ್ತೊಂದು ಘಟನೆಯಲ್ಲಿ ತುರುವೇಕೆರೆ ತಾಲೂಕು ದೆಬ್ಬೇಘಟ್ಟ ಹೋಬಳಿ ದೇವನಾಯಕನಹಳ್ಳಿ ಗ್ರಾಮದ ಕೆಂಪರಾಜು (32) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಗಳು.

ಅಶ್ವಥ್ ಹಲವು ದಿನಗಳಿಂದ ರಕ್ತದ ಒತ್ತಡದಿಂದ ಬಳಲುತ್ತಿದ್ದರು. ಜತೆಗೆ ಅವರ ಮಗ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಇದರಿಂದ ಮನನೊಂದ ಆತ, ತನ್ನ ಹೆಂಡತಿ ಮಕ್ಕಳನ್ನು ತಿರುಪತಿಗೆ ಕಳಿಸಿ, ಯಾರು ಇಲ್ಲದ ಸಮಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಶ್ರೀ ಹುಲಿಗೆಮ್ಮ ದೇವಿಯ ಮಹಾರಥೋತ್ಸವ

ಕೆಂಪರಾಜು ಮೂಲತಃ ದೇವನಾಯಕನಹಳ್ಳಿ ಗ್ರಾಮದವನಾಗಿದ್ದು, ಕಳೆದ ಐದು ವರ್ಷಗಳಿಂದ ಕುಣಿಗಲ್‌ನಲ್ಲಿ ಸಣ್ಣ ಪುಟ್ಟ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಆದರೆ ಹಲವು ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದರು. ಇದರಿಂದ ಮನನೊಂದು, ಕುಣಿಗಲ್ ಪಟ್ಟಣದ ಶಿಕ್ಷಕರ ಭವನದ ಕಿಟಕಿಗೆ  ಹಗ್ಗ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕುಣಿಗಲ್ ಠಾಣೆಯ ಪೊಲೀಸರು ಎರಡು ಪ್ರಕರಣಗಳನ್ನು ದಾಖಲಿಸಿಕೊಂಡು ತನಿಖೆಕೈಗೊಂಡಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next