Advertisement

Kunigal; ಬೈಕ್ ಗೆ ಕ್ಯಾಂಟರ್ ಡಿಕ್ಕಿ:ಇಬ್ಬರು ಯುವಕರು ಸ್ಥಳದಲ್ಲೇ ಮೃ*ತ್ಯು

09:11 PM Sep 27, 2024 | Team Udayavani |

ಕುಣಿಗಲ್:ಬೈಕ್ ಹಿಂಬದಿಗೆ ಕ್ಯಾಂಟರ್ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಾಜ್ಯ ಹೆದ್ದಾರಿ 33 ರ ಗಿರಿಗೌಡನಪಾಳ್ಯ ಗೇಟ್ ಬಳಿ ಶುಕ್ರವಾರ (ಸೆ.27) ಸಂಭವಿಸಿದೆ.

Advertisement

ತಾಲೂಕಿನ ಕಸಬಾ ಹೋಬಳಿ ಟಿ.ಹೊಸಹಳ್ಳಿ ಗ್ರಾಮದ ಯೋಗಾನಂದ (25), ಶ್ರೀನಿವಾಸ್ ಗೌಡ (22) ಮೃತ ದುರ್ದೈವಿಗಳು.

ಕೆಲಸದ ನಿಮಿತ್ತ ಯೋಗಾನಂದ ಹಾಗೂ ಶ್ರೀನಿವಾಸ್ ಇಬ್ಬರು ಬೈಕ್ ನಲ್ಲಿ ಕುಣಿಗಲ್ ಪಟ್ಟಣಕ್ಕೆ ಬರುತ್ತಿದ್ದ ವೇಳೆ ಹುಲಿಯೂರು ದುರ್ಗದ ಕಡೆಯಿಂದ ಕುಣಿಗಲ್ ಕಡೆಗೆ ಬರುತ್ತಿದ್ದ ಕ್ಯಾಂಟರ್ ಢಿಕ್ಕಿ ಹೊಡೆದು ಅವಘಡ ಸಂಭವಿಸಿದೆ ಎನ್ನಲಾಗಿದೆ.

ಗಣೇಶ ವಿಸರ್ಜನೆಯಲ್ಲಿ ಭಾಗಿ

ಕುಣಿಗಲ್ ಪಟ್ಟಣದ ಜೆಕೆ ಟೈರ್ ಅಂಗಡಿಯಲ್ಲಿ ಕೆಲಸ‌ ಮಾಡುತ್ತಿದ್ದ ಶ್ರೀನಿವಾಸ್ ಶುಕ್ರವಾರ ಕುಣಿಗಲ್ ಪಟ್ಟಣದಲ್ಲಿ ನಡೆದ ಹಿಂದೂ ಮಹಾ ಸಭಾ ಗಣಪತಿ ವಿಸರ್ಜನಾ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಸಿ ಸಂಭ್ರಮಿಸಿ ಊರಿಗೆ ತೆರಳಿ ಮತ್ತೆ ಕುಣಿಗಲ್ ಕಡೆ ಬರುತ್ತಿದ್ದ ವೇಳೆ ಅವಘಡ ನಡೆದು ಪ್ರಾಣ ಕಳೆದುಕೊಂಡಿದ್ದಾನೆ ಎನ್ನಲಾಗಿದೆ.

Advertisement

ಕುಣಿಗಲ್ ಪಟ್ಟಣದ ಸರ್ಕಾರಿ ಆಸ್ಪತ್ರೆ ಗೆ ತೆರಳಿ ಶವಗಳನ್ನು ನೋಡಿದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಘಟನೆಗೆ ಸಂಬಂಧಿಸಿ ಕುಣಿಗಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ

Advertisement

Udayavani is now on Telegram. Click here to join our channel and stay updated with the latest news.

Next