Advertisement

Kunigal; ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿ: ಇಬ್ಬರು ಸಾವು

09:22 PM Jan 07, 2024 | Team Udayavani |

ಕುಣಿಗಲ್ : ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ತಾಲೂಕಿನ ಹುಲಿಯೂರುದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯ ರಾಜ್ಯ ಹೆದ್ದಾರಿ 33 ಕೃಷ್ಣಪ್ಪನ ಕೊಪ್ಪಲು ಗ್ರಾಮದಲ್ಲಿ ಭಾನುವಾರ ಸಂಭವಿಸಿದೆ.

Advertisement

ರಾಮನಗರ ಜಿಲ್ಲೆ ಚನ್ನಪಟ್ಟಣದ ಅಮಾನ್ ಉಲ್ಲಾ ಖಾನ್( 60), ಸೈಯದ್ ಮುನಾವರ್ (50) ಮೃತ ದುರ್ದೈವಿಗಳು.

ಘಟನೆ ವಿವರ : ಅಮಾನ್ ಉಲ್ಲಾ ಖಾನ್ ಹಾಗೂ ಸೈಯದ್ ಮುನಾವರ್ ಹುಲಿಯೂರುದುರ್ಗದಲ್ಲಿ ತಮ್ಮ ಸಂಬಂಧಿಕರ ಮದುವೆಗೆ ಬೈಕ್ ನಲ್ಲಿ ಚನ್ನಪಟ್ಟಣದಿಂದ ಹುಲಿಯೂರುದುರ್ಗಕ್ಕೆ ಬರುತ್ತಿದ್ದ ವೇಳೆ ರಾಜ್ಯ ಹೆದ್ದಾರಿ 33 ಕೃಷ್ಣಪ್ಪನಕೊಪ್ಪಲು ಸಮೀಪ ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ ಎನ್ನಲಾಗಿದ್ದು, ಘಟನೆಯಲ್ಲಿ ಗಾಯಗೊಂಡಿದ್ದ ಇಬ್ಬರನ್ನು ಬೆಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಪೊಲೀಸರ ಪ್ರಥಮ ಮಾಹಿತಿಯಲ್ಲಿ ತಿಳಿದು ಬಂದಿದೆ.

ಈ ಸಂಬಂಧ ಹುಲಿಯೂರುದುರ್ಗ ಪೊಲೀಸರು ತನಿಖೆ ಕೈಗೊಂಡಿದ್ದಾರೆ

Advertisement

Udayavani is now on Telegram. Click here to join our channel and stay updated with the latest news.

Next