Advertisement

‘ಕುಂಟಂಗೇರಡ್ಕ ಸಾಧನೆ ಸಾರ್ಥಕ’

12:45 AM Jul 10, 2019 | Team Udayavani |

ಕುಂಬಳೆ: ಹಸಿರು ಇಂದು ನಮ್ಮ ಪರಿಸರದಿಂದ ಮಾಯವಾಗುತ್ತಿದೆ. ಕಾಂಕ್ರೀಟೀಕರಣಕ್ಕೆ ನಾವು ಮಾರುಹೋಗುತ್ತಿದ್ದೇವೆ. ಇಂತಹ ಸಂದರ್ಭದಲ್ಲಿ ಹರಿತ ಕೇರಳ ಮಿಶನ್‌ ಹಸಿರು ತಾಣ ಎಂಬ ಹಸಿರು ಬೆಳೆಸಿ ಉಳಿಸುವ ಯೋಜನೆಯೊಂದಕ್ಕೆ ರೂಪು ನೀಡಿದೆ. ಇಂದು ಅದು ಕುಂಬಳೆ ಗ್ರಾಮ ಪಂಚಾಯತ್‌ನ ಕಿದೂರು ಕುಂಟಂಗೇರಡ್ಕದಲ್ಲಿ ಸಾರ್ಥಕವಾಗಿದೆ ಎಂದು ಹಸಿರು ತಾಣವನ್ನು ಉದ್ಘಾಟಿಸಿ ಕುಂಬಳೆ ಗ್ರಾಮ ಪಂಚಾಯತ್‌ ಅಧ್ಯಕ್ಷರಾದ ಪುಂಡರೀಕಾಕ್ಷ ಹೇಳಿದರು.

Advertisement

ಕಿದೂರು ಪಕ್ಷಿಪ್ರೇಮಿ ತಂಡವು ಪಾಳು ಬಿದ್ದ ಸರಕಾರಿ ಭೂಮಿಯನ್ನು ಕಳೆದ ಮೂರು ವರ್ಷಗಳಿಂದ ಜೈವ ಬೇಲಿ ನಿರ್ಮಿಸಿ ಅಲ್ಲಿ ಸ್ಥಳೀಯ ಸಸ್ಯ ಸಂಪತ್ತನ್ನು ಸಂರಕ್ಷಿಸಿ ಬರುತ್ತಿತ್ತು. ಇದೀಗ ಅದೇ ಜಾಗವನ್ನೇ ಹಸಿರು ತಾಣವನ್ನಾಗಿ ಘೋಷಿಸಲಾಯಿತು. ಅಲ್ಲದೆ ಹೆಚ್ಚಿನ ಸಸ್ಯ ಪ್ರಭೇದಗಳನ್ನು ನೆಟ್ಟು ಬೆಳೆಸುವಲ್ಲಿ ಗ್ರಾಮೀಣ ಉದ್ಯೋಗ ಖಾತರಿಯ ಸದಸ್ಯರಿಗೆ ಜವಾಬ್ದಾರಿ ನೀಡಲಾಯಿತು.

ಗ್ರಾಮ ಪಂಚಾಯತ್‌ ಸದಸ್ಯರಾದ ಅರಣಾ ಮಂಜುನಾಥ ಆಳ್ವ ಅಧ್ಯಕ್ಷತೆ ವಹಿಸಿದರು.

ಹರಿತ ಕೇರಳ ಮಿಶನಿನ ಜಿಲ್ಲಾ ಸಂಯೋಜಕ ಅಭಿರಾಜ್‌, ಕುಂಬಳೆ ಗ್ರಾಮ ಪಂಚಾಯತ್‌ ಕಾರ್ಯದರ್ಶಿ ಜಯನ್‌, ಸಾಮಾಜಿಕ ಮುಂದಾಳು ಚಂದ್ರ ಕಾಜೂರು, ಚಂದ್ರಾವತಿ ಮಡ್ವ, ಕಿದೂರು ಪಕ್ಷಿ ಪ್ರೇಮಿ ತಂಡದ ಸದಸ್ಯರಾದ ರಾಜು ಕಿದೂರು, ಪ್ರದೀಪ್‌ ಕಿದೂರು, ರವಿಚಂದ್ರ ಕುಂಟಂಗೇರಡ್ಕ, ಸುಂದರ ಕೊಲ್ಲೂರು, ಜೋಯೆಲ್ ಕಿದೂರು ಮೊದಲಾದವರು ಭಾಗವಹಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next