Advertisement

ಕುರಂಕೋಟೆ ಗ್ರಾ.ಪಂ.ಅಧ್ಯಕ್ಷರಾಗಿ ಶೈಲಜಾ ಅವಿರೋಧ ಆಯ್ಕೆ

01:28 PM Apr 30, 2022 | Team Udayavani |

ಕೊರಟಗೆರೆ: ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಕುರಂಕೋಟೆ ಗ್ರಾಮ ಪಂಚಾಯ್ತಿಯ ನೂತನ ಅಧ್ಯಕ್ಷರಾಗಿ ಶೈಲಜಾ ಬಾಬು ಹಾಗೂ ಉಪಾಧ್ಯಕ್ಷರಾಗಿ ಸುಶೀಲಮ್ಮ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

Advertisement

ಕುರಂಕೋಟೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕುರುಬರಹಳ್ಳಿ ಗ್ರಾ.ಪಂ. ಕ್ಷೇತ್ರದಿಂದ ಮೊದಲ ಬಾರಿಗೆ ಗ್ರಾ.ಪಂ. ಸದಸ್ಯರಾಗಿ ಆಯ್ಕೆಯಾಗಿದ್ದ ಶೈಲಜಾ ಬಾಬು ಅವರು ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿರುವುದು ವಿಶೇಷವಾಗಿದೆ.

ಕುರುಕಂಕೋಟೆ ಗ್ರಾ.ಪಂ. ಅಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿದ್ದ ಹಿನ್ನೆಲೆಯಲ್ಲಿ ಈ ಮೊದಲು ಅಧ್ಯಕ್ಷರಾಗಿ ಜೋನಿಗರಹಳ್ಳಿ ಕ್ಷೇತ್ರ ರೇಖಾ ಸಿದ್ದರಾಜು ಮತ್ತು ಶೈಲಜಾ ಬಾಬು ಅವರ ನಡುವೆ 14 ತಿಂಗಳ ಅವಧಿಗೆ ಒಪ್ಪಂದವಾಗಿತ್ತು. ಅದರಂತೆ ರೇಖಾ ಜೆ.ಇ. ಅವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಶೈಲಜಾ ಬಾಬು ಅವರು ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಹಾಗೆಯೇ ಉಪಾಧ್ಯಕ್ಷ ಸ್ಥಾನಕ್ಕೂ ಸಹ 14 ತಿಂಗಳ ಒಪ್ಪಂದ ಮಾಡಿಕೊಂಡಿದ್ದು, ಸುಶೀಲಮ್ಮ ಅವರನ್ನು ಉಪಾಧ್ಯಕ್ಷರನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

ಚುನಾವಣಾಧಿಕಾರಿ ಕಾರ್ಯನಿರ್ವಹಿಸಿದ ತಹಶೀಲ್ದಾರ್ ನಹೀದಾ ಜಮ್ ಜಮ್ ಅವರು ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಅವಿರೋಧ ಆಯ್ಕೆಯನ್ನು ಘೋಷಿಸಿದರು.

Advertisement

ನೂತನ ಅಧ್ಯಕ್ಷೆ ಶೈಲಜಾ ಬಾಬು ಅವರು ಮಾತನಾಡಿ ತಮ್ಮ ಅವಿರೋಧ ಆಯ್ಕೆಗೆ ಸಹಕರಿಸಿದ ಗ್ರಾಮ ಪಂಚಾಯ್ತಿಯ ಎಲ್ಲ ಸದಸ್ಯರುಗಳಿಗೆ ಕೃತಜ್ಞತೆ ಸಲ್ಲಿಸುವುದಾಗಿ ಹೇಳಿದರು.

ಕುರಂಕೋಟೆ ಗ್ರಾ.ಪಂ. ಸಂಸದ ಆದರ್ಶ ಗ್ರಾಮಕ್ಕೆ ಆಯ್ಕೆಯಾಗಿದ್ದು, ಪಂಚಾಯ್ತಿ ಎಲ್ಲ ಹಳ್ಳಿಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ಶ್ರಮಿಸಲಾಗುವುದು. ಎಲ್ಲ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಜನರ ಸಮಸ್ಯೆಗಳಿಗೆ ಸ್ಪಂದಿಸುವುದಾಗಿ ಅವರು ತಿಳಿಸಿದರು.

ನೂತನ ಅಧ್ಯಕ್ಷೆ ಮತ್ತು ಉಪಾಧ್ಯಕ್ಷರನ್ನು ಪಂಚಾಯ್ತಿಯ ಸದಸ್ಯರುಗಳು, ಅಧಿಕಾರಿಗಳು ಅಭಿನಂದಿಸಿದರು.

ಈ ಸಂದರ್ಭದಲ್ಲಿ ಪಂಚಾಯ್ತಿ ಸದಸ್ಯರುಗಳು, ಅಭಿವೃದ್ಧಿ ಅಧಿಕಾರಿ ರಂಗನರಸಯ್ಯ ಮತ್ತು ಸಿಬ್ಬಂದಿ ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next