Advertisement

ಕುರುಗೋಡು: ಬೇಡಿಕೆಗಳು ಈಡೇರಿಸುವುದಾಗಿ ಭರವಸೆಯಲ್ಲೇ ಕೈ ತೊಳೆದುಕೊಂಡ ಸಚಿವರು, ಶಾಸಕರು.!

01:21 PM Feb 11, 2023 | Team Udayavani |

ಕುರುಗೋಡು: ಸಮೀಪದ ಕುಡುತಿನಿಯಲ್ಲಿ ಭೂಮಿ ಕಳೆದುಕೊಂಡ ರೈತರು ನ್ಯಾಯಕ್ಕಾಗಿ ಕಾರ್ಖಾನೆಗಳ ವಿರುದ್ಧ ನಡೆಸುತ್ತಿರುವ ಮುಷ್ಕರ 56ನೇ ದಿನಕ್ಕೆ ಕಾಲಿಟ್ಟಿದೆ.

Advertisement

ಆದರೂ ಅಧಿಕಾರಿಗಳು ಮತ್ತು ಜನಪ್ರತಿನಿದಿಗಳು ಬಂದು ಬರೀ ಸುಳ್ಳು ಭರವಸೆ ನೀಡುತ್ತಿದ್ದಾರೆಯೆ ಹೊರತು ಸಮಸ್ಯೆ ಆಲಿಸಲು ಮುಂದಾಗುತ್ತಿಲ್ಲ ಎಂದು ಪ್ರತಿಭಟನೆಯಲ್ಲಿ ನಿರತರಾಗಿರುವ ಸಂತ್ರಸ್ತರು ಆಕ್ರೋಶ ಹೊರಹಾಕಿದರು.

56ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆಯ ಕಾವು ಜೋರಾಗಿ ಮುಂದುವರಿದಿದೆ.

ಸಾರಿಗೆ ಸಚಿವ ಶ್ರೀರಾಮುಲು ಹಾಗೂ ಶಾಸಕ ತುಕಾರಾಂ ಅವರು ಚುನಾವಣೆ ಹತ್ತಿರ ಬಂದಿರುವುದರಿಂದ ಹೋರಾಟಗಾರರಿಗೆ ಮತ್ತು ಭೂಮಿ ಕಳೆದುಕೊಂಡ ರೈತರಿಗೆ ಇದನ್ನು ಸರಕಾರದ ಗಮನಕ್ಕೆ ತಂದು ವಿಧಾನಸಭೆಯಲ್ಲಿ ಮುಖ್ಯಮಂತ್ರಿಗಳ ಜೊತೆ ಚರ್ಚೆ ನಡೆಸಿ ಆದಷ್ಟು ಬೇಗ ಸಮಸ್ಯೆಗಳನ್ನು ಬಗೆಹರಿಸುತ್ತೇನೆ ಎಂದು ಶ್ರೀರಾಮುಲು ಕೇವಲ ಸುಳ್ಳು ಭರವಸೆ ನೀಡಿ ಕೈ ತೊಳೆದುಕೊಂಡಿದ್ದಾರೆ.

ಅದರಂತೆ ಶಾಸಕ ತುಕಾರಾಂ ಕೂಡ ಸರಕಾರದ ಒತ್ತಡಕ್ಕೆ, ಪ್ರತಿಭಟನಾಕಾರರಲ್ಲಿ, ನಿಮ್ಮ ಜೊತೆಗೆ ಹೋರಾಟ ಮಾಡಿ ಸಮಸ್ಯೆ ಇತ್ಯಾರ್ಥಗೊಳಿಸಿ ಮೊದಲು ನಾನೆ ನಿಮ್ಮ ಜಮೀನುಗಳಲ್ಲಿ ಕುಂಟೆ ಹೊಡೆಯುತ್ತೇನೆ ಎಂದು ಭರವಸೆ ನೀಡಿದವರು ಇನ್ನೂ ಇದುವರೆಗೂ ಇತ್ತ ಕಡೆ ತಲೆ ಹಾಕಿಲ್ಲ ಎಂದು ಸಾರಿಗೆ ಸಚಿವರ ಮತ್ತು ಶಾಸಕ ತುಕಾರಾಂ ಹಾಗೂ ಸರಕಾರದ ವಿರುದ್ದ ಘೋಷಣೆ ಕೂಗಿದರು.

Advertisement

ಪ್ರತಿಭಟನೆ 56ನೇ ದಿನಕ್ಕೆ ಕಾಲಿಟ್ಟರೂ ಕೂಡಾ ಸಂಸದ ವೈ. ದೇವೇಂದ್ರಪ್ಪ ಅವರು ಒಂದು ದಿನ ಕೂಡ ರೈತರ ಪ್ರತಿಭಟನೆ ಕಡೆಗೆ ತಲೆ ಹಾಕದೆ ಸಮಸ್ಯೆಗಳ ಅಹವಾಲು ಸ್ವೀಕರಿಸದೆ ಇರುವುದು ಶೋಭೆಯಲ್ಲ ಎಂದು, ದೇವೇಂದ್ರಪ್ಪ ರೈತ ವಿರೋಧಿ ಎಂದು ಪ್ರತಿಭಟನೆಯಲ್ಲಿ ಘೋಷಣೆ ಕೂಗಿದರು. ಆದ್ದರಿಂದ ರೈತರ ಬೇಡಿಕೆಗಳು ಈಡೇರುವವರೆಗೂ ನ್ಯಾಯ ಸಿಗುವವರೆಗೆ ಹೋರಾಟ ಕೈ ಬಿಡುವ ಪ್ರಶ್ನೆಯೆ ಇಲ್ಲ ಎಂದರು.

ಕುಡಿತಿನಿ ಮತ್ತು ಸುತ್ತಮುತ್ತಲಿನ ಗ್ರಾಮಸ್ಥರು ಕಾರ್ಖಾನೆಗಳಿಗೆ ಭೂಮಿ ನೀಡಿ 13 ವರ್ಷ ಕಳೆದಿದೆ. ಯಾವುದೇ ಕಾರ್ಖಾನೆ ಸ್ಥಾಪನೆಯಾಗದ ಹಿನ್ನೆಲೆಯಲ್ಲಿ ಮಾಲಿಕರ ವಿರುದ್ಧ ನ್ಯಾಯಕ್ಕಾಗಿ ಪ್ರತಿಭಟನೆ ನಡೆಸಿದರು.

ಇದರ ಬಗ್ಗೆ ಸರ್ಕಾರ ಮತ್ತು ಸಂಬಂಧಪಟ್ಟ ಅಧಿಕಾರಿಗಳು ಪ್ರತಿಭಟನೆ ಸ್ಥಳಕ್ಕೆ ಆಗಮಿಸಿ ಸಾಂತ್ವನ ಹೇಳುವ ಸೌಜನ್ಯ ಕೂಡ ಇಲ್ಲದಿರುವುದು ನಾಚಿಕೆ ಗೇಡಿನ ಸಂಗತಿಯಾಗಿದೆ ಎಂದು ಪ್ರತಿಭಟನಾಕಾರರು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next