Advertisement

“ಕುರುಕ್ಷೇತ್ರ’- ಅಭಿಮನ್ಯು ಟೀಸರ್‌ ಬಿಡುಗಡೆ

12:56 PM Dec 17, 2017 | Team Udayavani |

ಮುನಿರತ್ನ ನಿರ್ಮಾಣದ “ಕುರುಕ್ಷೇತ್ರ’ ಚಿತ್ರದ ಟೀಸರ್‌ ಈಗಾಗಲೇ ಬಿಡುಗಡೆಯಾಗಿದೆ. ಶನಿವಾರ ಚಿತ್ರದ ಎರಡನೆಯ ಟೀಸರ್‌ ಬಿಡುಗಡೆಯಾಗಿದೆ. ವಿಶೇಷವೆಂದರೆ, ಈ ಬಾರಿ ಅಭಿಮನ್ಯುವನ್ನು ಪರಿಚಯಿಸುವಂತಹ ಟೀಸರ್‌ ಬಿಡುಗಡೆ ಮಾಡಲಾಗುತ್ತಿದ್ದು, ಅದನ್ನು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರಿಗೆ ಹುಟ್ಟುಹಬ್ಬದ ಕಾಣಿಕೆಯಾಗಿ ನೀಡಿದ್ದಾರೆ.


ಚಿತ್ರದಲ್ಲಿ ಅಭಿಮನ್ಯು ಪಾತ್ರ ಮಾಡಿರುವ ನಿಖಿಲ್‌. “ಕುರುಕ್ಷೇತ್ರ’ ಚಿತ್ರದಲ್ಲಿ ದರ್ಶನ್‌, ದುರ್ಯೋಧನನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಮಿಕ್ಕಂತೆ ಅಂಬರೀಶ್‌, ರವಿಚಂದ್ರನ್‌, ಅರ್ಜುನ್‌ ಸರ್ಜಾ, ಸಾಯಿಕುಮಾರ್‌, ಶಶಿಕುಮಾರ್‌, ರವಿಶಂಕರ್‌, ಶ್ರೀನಾಥ್‌, ಜಿ.ಕೆ. ಶ್ರೀನಿವಾಸಮೂರ್ತಿ, ಲಕ್ಷ್ಮೀ, ಸ್ನೇಹ, ಹರಿಪ್ರಿಯಾ ಸೇರಿದಂತೆ ಹಲವರು ನಟಿಸುತ್ತಿದ್ದಾರೆ.

Advertisement

ಚಿತ್ರಕ್ಕೆ ಹೆಸರಾಂತ ತಂತ್ರಜ್ಞರ ತಂಡವನ್ನು ಕಲೆ ಹಾಕಲಾಗಿದ್ದು, ಜಯನನ್‌ ವಿನ್ಸೆಂಟ್‌ ಛಾಯಾಗ್ರಹಣ, “ಕಿಂಗ್‌ ಸಾಲೋಮನ್‌’ ರವಿ ಸಾಹಸ, ಹರಿಕೃಷ್ಣ ಸಂಗೀತ, ಜೊ.ನಿ.ಹರ್ಷ ಸಂಕಲನ ಚಿತ್ರಕ್ಕಿದೆ. ಜಿ.ಕೆ. ಭಾರವಿ ಅವರು ಚಿತ್ರಕಥೆಯನ್ನು ರಚಿಸಿದ್ದು, ಯೋಜನಾ ನಿರ್ದೇಶಕರಾಗಿ ಜಯಶ್ರೀದೇವಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇನ್ನು ಹಿರಿಯ ನಿರ್ದೇಶಕ ನಾಗಣ್ಣ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next