Advertisement

ತಡವಾಗುತ್ತಿದೆ ಕುರುಕ್ಷೇತ್ರ 

01:10 PM Dec 17, 2017 | |

“ಕುರುಕ್ಷೇತ್ರ’ ಚಿತ್ರದ ಮುಹೂರ್ತ ದಿನ ನಿರ್ಮಾಪಕರ ಮುನಿರತ್ನ ಅವರು “ಕುರುಕ್ಷೇತ್ರ’ ಚಿತ್ರದ ಆಡಿಯೋ ಬಿಡುಗಡೆಯನ್ನು ಡಿಸೆಂಬರ್‌ನಲ್ಲಿ ಅದ್ಧೂರಿಯಾಗಿ ಮಾಡಿ, ಜನವರಿಯಲ್ಲಿ ಚಿತ್ರ ಬಿಡುಗಡೆ ಮಾಡುವುದಾಗಿ ಹೇಳಿಕೊಂಡಿದ್ದರು. ಆದರೆ, ಈಗ ಅವರಂದುಕೊಂಡಂತೆ ಆಗುತ್ತಿಲ್ಲ. ಚಿತ್ರದ ಚಿತ್ರೀಕರಣ ಇನ್ನೂ ಮುಗಿದಿಲ್ಲ. ಇನ್ನೂ ಒಂದು ವಾರಕ್ಕೂ ಹೆಚ್ಚು ದಿನ ಹಾಡಿನ ಚಿತ್ರೀಕರಣ ಬಾಕಿ ಇದೆ. ಅಲ್ಲಿಗೆ ಶೂಟಿಂಗ್‌ ಏನೋ ಮುಗಿಯುತ್ತದೆ. ಆದರೆ, ಆ ನಂತರದ ಸಾಕಷ್ಟು ಕೆಲಸಗಳು ಬಾಕಿ ಇವೆ. ಮುಖ್ಯವಾಗಿ “ಕುರುಕ್ಷೇತ್ರ’ ಚಿತ್ರಕ್ಕೆ ಗ್ರಾಫಿಕ್‌ ವರ್ಕ್‌ ಹೆಚ್ಚಿರುವುದರಿಂದ ಅದಕ್ಕೆ ಸಾಕಷ್ಟು ಸಮಯ ತೆಗೆದುಕೊಳ್ಳುತ್ತದೆ. ಹಾಗಾಗಿ, ಚಿತ್ರ ಬಿಡುಗಡೆ ಕೂಡಾ ತಡವಾಗುತ್ತದೆ. “ಚಿತ್ರದ ಸಾಕಷ್ಟು ಕೆಲಸಗಳು ಬಾಕಿ ಇವೆ. ನಾನು ಚಿತ್ರವನ್ನು ಸಂಕ್ರಾಂತಿಗೆ ಬಿಡುಗಡೆ ಮಾಡಬೇಕೆಂದಿದ್ದೆ. ಆದರೆ, ನನಗೆ ಚಿತ್ರದ ಪ್ರಥಮ ಪ್ರತಿ ಸಿಗೋದೇ ಫೆಬ್ರವರಿ ಕೊನೆಗೆ. ಹಾಗಾಗಿ, ಚಿತ್ರವನ್ನು ಮಾರ್ಚ್‌ನಲ್ಲಿ ಬಿಡುಗಡೆ ಮಾಡಬೇಕಾಗುತ್ತದೆ. ದೊಡ್ಡ ಕ್ಯಾನ್‌ವಾಸ್‌ ಇರುವ ಸಿನಿಮಾ. ಸಾಕಷ್ಟು ಮಂದಿ ತಂತ್ರಜ°ರು ಈ ಚಿತ್ರಕ್ಕೆ ದುಡಿದಿದ್ದಾರೆ’ ಎಂದು ಚಿತ್ರದ ಬಗ್ಗೆ ಹೇಳುತ್ತಾರೆ ಮುನಿರತ್ನ.

Advertisement

 “ಕುರುಕ್ಷೇತ್ರ’ ಚಿತ್ರದಲ್ಲಿ ದರ್ಶನ್‌, ದುರ್ಯೋಧನನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಮಿಕ್ಕಂತೆ ಅಂಬರೀಶ್‌, ರವಿಚಂದ್ರನ್‌, ಅರ್ಜುನ್‌ ಸರ್ಜಾ, ಸಾಯಿಕುಮಾರ್‌, ಶಶಿಕುಮಾರ್‌, ರವಿಶಂಕರ್‌, ಶ್ರೀನಾಥ್‌, ಜಿ.ಕೆ. ಶ್ರೀನಿವಾಸಮೂರ್ತಿ, ಲಕ್ಷ್ಮೀ, ಸ್ನೇಹ, ಹರಿಪ್ರಿಯಾ, ನಿಖೀಲ್‌ ಕುಮಾರ್‌ ಸೇರಿದಂತೆ ಹಲವರು ನಟಿಸುತ್ತಿದ್ದಾರೆ. ಚಿತ್ರಕ್ಕೆ ಹೆಸರಾಂತ ತಂತ್ರಜ್ಞರ ತಂಡವನ್ನು ಕಲೆ ಹಾಕಲಾಗಿದ್ದು, ಜಯನನ್‌ ವಿನ್ಸೆಂಟ್‌ ಛಾಯಾಗ್ರಹಣ, “ಕಿಂಗ್‌ ಸಾಲೋಮನ್‌’ ರವಿ ಸಾಹಸ, ಹರಿಕೃಷ್ಣ ಸಂಗೀತ, ಜೊ.ನಿ.ಹರ್ಷ ಸಂಕಲನ ಚಿತ್ರಕ್ಕಿದೆ. ಜಿ.ಕೆ. ಭಾರವಿ ಅವರು ಚಿತ್ರಕಥೆಯನ್ನು ರಚಿಸಿದ್ದು, ಯೋಜನಾ ನಿರ್ದೇಶಕರಾಗಿ ಜಯಶ್ರೀದೇವಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇನ್ನು ಹಿರಿಯ ನಿರ್ದೇಶಕ ನಾಗಣ್ಣ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next