Advertisement

ಕೊಡಗಿನಲ್ಲಿ ಬಿಜೆಪಿಯವರು ಸಿದ್ದರಾಮಯ್ಯ ಅವರ ಕಾರಿಗೆ ಮೊಟ್ಟೆ ಎಸೆದಿರುವುದು ಕೆಟ್ಟ ಸಂಸ್ಕಾರ

01:20 PM Aug 19, 2022 | Team Udayavani |

ಕುಷ್ಟಗಿ: ಮಾಜಿ ಸಿಎಂ ಸಿದ್ದರಾಮಯ್ಯ ಅವರ ಕಾರಿಗೆ ಮೊಟ್ಟೆ ಎಸೆದರೆ ಅವರ ಗೌರವ ಕಡಿಮೆ ಆಗುವುದಿಲ್ಲ. ಬದಲಿಗೆ ಅವರ ಗೌರವ ಹೆಚ್ಚುತ್ತದೆ. ಇಂತಹ ನೀಚ ಕೆಲಸ ಯಾರೂ ಮಾಡಬಾರದು ಎಂದು ಶಾಸಕ ಅಮರೇಗೌಡ ಪಾಟೀಲ ಬಯ್ಯಾಪೂರ ಹೇಳಿದರು.

Advertisement

ಕುಷ್ಟಗಿಯ ತಾಲೂಕಾ ಕ್ರೀಡಾಂಗಣದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಡಿಯಲ್ಲಿ ಗಂಗಾ ಕಲ್ಯಾಣ ಯೋಜನೆಯ 64 ಫಲಾನುಭವಿಗಳಿಗೆ ಪಂಪ್ ಸೆಟ್ ಪೂರಕ ಸಾಮಾಗ್ರಿಗಳನ್ನು ವಿತರಿಸಿದ ಬಳಿಕ, ಸುದ್ದಿಗಾರರೊಂದಿಗೆ ಮಾತನಾಡಿದ ಅವರು,‌ ಸಿಎಂ, ಮಾಜಿ ಸಿಎಂ, ವಿಪಕ್ಷ ನಾಯಕ ಹೀಗೆ ರಾಜಕಾರಣಿಗಳಿಗೆ ಅವಮಾನಿಸುವುದು ಸರಿ ಅಲ್ಲ. ರಾಜಕಾರಣ ಒಂದು ದಿನದ ಮಾತಲ್ಲ, ನಿತ್ಯ ನಿರಂತರವಾಗಿರುತ್ತದೆ. ಕೊಡಗಿನಲ್ಲಿ ಬಿಜೆಪಿಯವರು ಸಿದ್ದರಾಮಯ್ಯ ಅವರ ಕಾರಿಗೆ ಮೊಟ್ಟೆ ಎಸೆದಿರುವುದು ಕೆಟ್ಟ ಸಂಸ್ಕಾರವಾಗಿದೆ. ಬಿಜೆಪಿಯವರ ಈ ಕುಕೃತ್ಯವನ್ನು ಖಂಡಿಸುವುದಾಗಿ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next