Advertisement

ತನ್ನ ಮಗನನ್ನು ಸರಕಾರಿ ಅಂಗನವಾಡಿಗೆ ಸೇರಿಸಿ ಮಾದರಿಯಾದ ಪ್ರಧಾನ ಸಿವಿಲ್ ನ್ಯಾಯಾಧೀಶರು

09:12 PM Dec 22, 2021 | Team Udayavani |

ಕುಷ್ಟಗಿ: ಇಲ್ಲಿನ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಚಂದ್ರಶೇಖರ ತಳವಾರ ಅವರ ಮಗ ಶ್ರೀನಿವಾಸ ನನ್ನು ಇಲ್ಲಿನ ಇಂದಿರಾ ನಗರದ ಅಂಗನವಾಡಿ ಕೇಂದ್ರಕ್ಕೆ ಹೆಸರು ದಾಖಲಿಸುವ ಮೂಲಕ ಮಾದರಿಯಾಗಿದ್ದಾರೆ.

Advertisement

ಸರಕಾರಿ ಶೈಕ್ಷಣಿಕ ಸಂಸ್ಥೆಗಳಲ್ಲಿ ಅಸಡ್ಡೆ ವ್ಯಕ್ತಪಡಿಸುವ ಇಂದಿನ ದಿನಮಾನಗಳಲ್ಲಿ ಜನಪ್ರತಿನಿಧಿಗಳು, ಸರ್ಕಾರಿ ಸೇವೆಯಲ್ಲಿರುವವರೇ ಎಷ್ಟೇ ಹಣ ಖರ್ಚಾದರೂ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವುದು ಸರ್ವೆ ಸಾಮಾನ್ಯ ಪೂರ್ವ ಪ್ರಾಥಮಿಕ ಶಿಕ್ಷಣದಿಂದ ಕಾಲೇಜು ಶಿಕ್ಷಣದವರೆಗೂ ಖಾಸಗಿ ಶಾಲೆಯಲ್ಲಾದರೆ ಉತ್ತಮ ಶಿಕ್ಷಣ ಸಿಗಲಿದೆ ಎನ್ನುವ ಭ್ರಮೆಯಲ್ಲಿರುವವರಿಗೆ ಕುಷ್ಟಗಿಯ ನ್ಯಾಯಾಧೀಶರ ನಡೆ ನೈತಿಕತೆ ಪ್ರಶ್ನಿಸುವಂತಿದೆ.

ಪಟ್ಟಣದ 4ನೇ ವಾರ್ಡನ 15ನೇ ಅಂಗನವಾಡಿ ಕೇಂದ್ರದಲ್ಲಿ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಚಂದ್ರಶೇಖರ ತಳವಾರ ಅವರ ಮಗನಿಗೆ ಶ್ರೀನಿವಾಸ 3ವರ್ಷ 10 ತಿಂಗಳಾಗಿದ್ದರಿಂದ ಹೆಸರು ದಾಖಲಿಸಿದರು. ಬುಧವಾರ ಬೆಳಗ್ಗೆ ನ್ಯಾಯಾಧಿಶರ ಮಗನನ್ನು ಅಂಗನವಾಡಿ ಕಾರ್ಯಕರ್ತೆ ಸುನೀತಾ ಅಬ್ಬಿಗೇರಿ, ಸಹಾಯಕಿ ದುರಗಮ್ಮ ಆರತಿ ಬೆಳಗಿ ಸ್ವಾಗತಿಸಿಕೊಳ್ಳಲಾಯಿತು.

ನ್ಯಾಯಾಧೀಶರ ಮಗ ನಮ್ಮ ಅಂಗನವಾಡಿ ಕೇಂದ್ರ ಸೇರಿಸಿರುವುದು ನಮಗೆಲ್ಲಾ ಹೆಮ್ಮೆಯ ವಿಷಯ. ನ್ಯಾಯಾಧೀಶರ ಈ ನಡೆಯಿಂದ ನಮ್ಮ ಅಂಗನವಾಡಿ ಕೇಂದ್ರಗಳಿಗೆ ವಿಶ್ವಾಸಾರ್ಹತೆ ಹೆಚ್ಚಿದ್ದು ಸಂತಸವಾಗಿದೆ ಎಂದು ಸಿಡಿಪಿಓ ಅಮರೇಶ ಹಾವಿನಾಳ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next