Advertisement

ಗಂಡನ ಹೆಸರಿನಲ್ಲಿ ರಾಜಕೀಯ ಮಾಡಿದವರು ಯಾರು? ಶೋಭಾ ಕರಂದ್ಲಾಜೆಗೆ ಕುಸುಮಾ ಪ್ರಶ್ನೆ

03:57 PM Oct 12, 2020 | keerthan |

ಬೆಂಗಳೂರು: ಡಿ.ಕೆ ರವಿ ಹೆಸರನ್ನು ಯಾರು ಬಳಸಿಕೊಂಡರೂ ಅವರಿಗೆ ಒಳ್ಳೆಯದಾಗಲ್ಲ ಎಂಬ ಸಂಸದೆ ಶೋಭಾ ಕರಂದ್ಲಾಜೆಯವರ ಹೇಳಿಕೆಗೆ ತಿರುಗೇಟು ನೀಡಿರುವ ಡಿ.ಕೆ ರವಿ ಪತ್ನಿ, ಆರ್.ಆರ್ ನಗರ ಉಪಚುನಾವಣೆ ಕೈ ಅಭ್ಯರ್ಥಿ ಕುಸುಮಾ ಹನುಂತರಾಯಪ್ಪ ನನ್ನ ಗಂಡನ ಹೆಸರಿನಲ್ಲಿ ರಾಜಕೀಯ ಮಾಡಿದವರು ಯಾರು? ಮಾಡುತ್ತಿರುವವರು ಯಾರು? ಎಂದಿದ್ದಾರೆ.

Advertisement

ಸಾಮಾಜಿಕ ಜಾಲತಾಣದಲ್ಲಿ ಈ ತಮ್ಮ ಪ್ರತಿಕ್ರಿಯೆ ಬರೆದಿರುವ ಕುಸುಮಾ, ಪ್ರೀತಿಯ ಅಕ್ಕ, ನನ್ನ ಗಂಡನ ಹೆಸರಿನಲ್ಲಿ ರಾಜಕೀಯ ಮಾಡಿದವರು ಯಾರು? ಮಾಡುತ್ತಿರುವವರು ಯಾರು? ಎನ್ನುವುದನ್ನು ಇಡೀ ದೇಶವೇ ನೋಡಿದೆ. ನೋಡುತ್ತಿದೆ. ಈ ಸಂದರ್ಭದಲ್ಲಿ ನನಗೆ ಅಕ್ಕ ಮಹಾದೇವಿಯವರ “ನೊಂದವರ ನೋವ ನೋಯದವರೆತ್ತ ಬಲ್ಲರೊ?” ಎಂಬ ವಚನ ನೆನಪಿಗೆ ಬರುತಿದೆ ಎಂದಿದ್ದಾರೆ.

ಇದನ್ನೂ ಓದಿ:ಸಿದ್ದು ವರ್ಸಸ್‌ ಎಚ್‌ಡಿಕೆ: ಜಾತಿಯನ್ನು ಯಾರೂ ಗುತ್ತಿಗೆ ತೆಗೆದುಕೊಂಡಿಲ್ಲ- ಸಿದ್ದು

ರವಿ ಅವರ ಹೆಸರನ್ನು ಬಳಸಿಕೊಂಡವರಿಗೆ ಒಳ್ಳೆಯದಾಗುವುದಿಲ್ಲ ಎಂದಿದ್ದೀರಿ!  ಇದು ನಿಮಗೆ ನೀವೇ ಹೇಳಿದಂತೆ ಇದೆ. ಕನ್ನಡಿ ಮುಂದೆ ನಿಂತು ಇನ್ನೊಮ್ಮೆ ಈ ಹೇಳಿಕೆ ಕೊಟ್ಟು ನೋಡಿ. ಸತ್ಯ ಮನದಟ್ಟಾಗಬಹುದು ಎಂದು ಶೋಭಾ ಕರಾಂದ್ಲಾಜೆಗೆ ತಿರುಗೇಟು ನೀಡಿದ್ದಾರೆ.

ಶೋಭಾ ಕರಂದ್ಲಾಜೆ ಹೇಳಿಕೆಗೆ ಕಾಂಗ್ರೆಸ್ ಭಾರಿ ವಿರೋಧ ವ್ಯಕ್ತಪಡಿಸಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ದಿನೇಶ್ ಗುಂಡೂರಾವ್, ಕುಸುಮಾ, ಅವರ ಪತಿ ಡಿ.ಕೆ.ರವಿ ಹೆಸರು ಬಳಸದಂತೆ ಶೋಭಾ ಕರಂದ್ಲಾಜೆ ತಾಕೀತು ಮಾಡಿರುವುದು ಅವರ ಕೀಳು ಮನಸ್ಥಿತಿಯನ್ನು ಬಿಂಬಿಸುತ್ತದೆ. ಕುಸುಮಾ ಶಾಸ್ತ್ರೋಕ್ತವಾಗಿ ಡಿ.ಕೆ.ರವಿಯವರನ್ನು ವಿವಾಹವಾದವರು, ಹೆಂಡತಿಯಾಗಿ ಗಂಡನ ಹೆಸರು ಬಳಸುವ ಹಕ್ಕು ಅವರಿಗಿದೆ. ಒಂದು ಹೆಣ್ಣಾಗಿ ಶೋಭಾ ಕರಂದ್ಲಾಜೆ ಅವರಿಗೆ ಶೋಭೆ ತರುವುದಿಲ್ಲ ಎಂದಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next