Advertisement

ಮೋದಿ ಹೆಸರೆತ್ತಲು ಹರಿಪ್ರಸಾದ್‌ಗೆ ಯಾವ ನೈತಿಕತೆ ಇದೆ: ಬಿಜೆಪಿ

11:35 PM Feb 11, 2023 | Team Udayavani |

ಉಡುಪಿ: ದೇಶಕ್ಕೆ ಸಮರ್ಥ ನಾಯಕತ್ವ ನೀಡಿ “ಸರ್ವ ಸ್ಪರ್ಶಿ; ಸರ್ವ ವ್ಯಾಪಿ’ ಅಭಿವೃದ್ಧಿಯ ಸಹಿತ ತನ್ನ ವೈಶಿಷ್ಟ್ಯಪೂರ್ಣ ಕಾರ್ಯವೈಖರಿ ಮೂಲಕ ಜನಮನ್ನಣೆ ಪಡೆದು ವಿಶ್ವನಾಯಕರೆನಿಸಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿಯವರ ಹೆಸರೆತ್ತಲೂ ಯೋಗ್ಯತೆ ಇಲ್ಲದ “ಕೋತ್ವಾಲ್‌ ಶಿಷ್ಯ’ ಬಿ.ಕೆ. ಹರಿಪ್ರಸಾದ್‌ ಅವರಿಗೆ ಯಾವ ನೈತಿಕತೆ ಇದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್‌ ನಾಯಕ್‌ ಪ್ರಶ್ನಿಸಿದ್ದಾರೆ.

Advertisement

ಕಾಂಗ್ರೆಸ್‌ನಿಂದ ನಡೆದ ಪ್ರಜಾಧ್ವನಿ ಯಾತ್ರೆ ಸಂದರ್ಭ ಹರಿಪ್ರಸಾದ್‌ ಅವರು ಕಾಂಗ್ರೆಸ್ಸಿನ ಟೂಲ್‌ ಕಿಟ್‌ ಪರ್ಸಂಟೇಜ್‌ ಪ್ರಹಸನದ ಜತೆ ತಳಕಿ ಹಾಕಿ ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ಆಡಿರುವ ಮಾತುಗಳನ್ನು ಖಂಡಿಸಿದ್ದಾರೆ.

ಇದನ್ನೂ ಓದಿ: “ಕಾಂಗ್ರೆಸ್‌ಗೆ ಪ್ರಜಾಧ್ವನಿ ಬಸ್‌ನಲ್ಲಿರುವಷ್ಟೇ ಸ್ಥಾನ’: ಅಶ್ವತ್ಥ ನಾರಾಯಣ

Advertisement

Udayavani is now on Telegram. Click here to join our channel and stay updated with the latest news.

Next