Advertisement

Mangaluru ಕೆವೈಸಿ ನೆಪ; 1.93 ಲಕ್ಷ ರೂ. ವಂಚನೆ

10:21 PM Sep 23, 2023 | Team Udayavani |

ಮಂಗಳೂರು: ಕೆವೈಸಿ ಮಾಡಿಸದಿದ್ದರೆ ಕ್ರೆಡಿಟ್‌ ಕಾರ್ಡ್‌ ಬ್ಲಾಕ್‌ ಆಗುತ್ತದೆ ಎಂದು ನಂಬಿಸಿ ಅಪರಿಚಿತ ವ್ಯಕ್ತಿಯೊಬ್ಬ 1,93,210 ರೂ. ವರ್ಗಾಯಿಸಿಕೊಂಡು ವಂಚಿಸಿರುವ ಕುರಿತಂತೆ ಸೆನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

ದೂರುದಾರರ ಮೊಬೈಲ್‌ಗೆ ಅಪರಿಚಿತ ಸಂಖ್ಯೆಯಿಂದ ಕೆವೈಸಿ ಅಪ್‌ಡೇಟ್‌ ಮಾಡುವ ಕುರಿತಂತೆ ಸಂದೇಶ ಬಂದಿದೆ. ಬಳಿಕ ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿ ಅಪ್‌ಡೇಟ್‌ ಮಾಡದಿದ್ದರೆ ಕ್ರೆಡಿಟ್‌ ಕಾರ್ಡ್‌ ಬ್ಲಾಕ್‌ ಆಗುತ್ತದೆ ಎಂದು ತಿಳಿಸಿದ್ದಾನೆ. ಇದನ್ನು ನಂಬಿದ ದೂರುದಾರರು ಸಂದೇಶದಲ್ಲಿ ಬಂದಿದ್ದ ಲಿಂಕ್‌ ಮೂಲಕ ಕ್ರೆಡಿಟ್‌ ಕಾರ್ಡ್‌ ನಂಬರ್‌ ನಮೂದಿಸಿ, ಒಟಿಪಿ ನೀಡಿದ್ದಾರೆ.

ತತ್‌ಕ್ಷಣ ಹಂತ ಹಂತವಾಗಿ 1.93 ಲಕ್ಷ ರೂ. ಅವರ ಖಾತೆಯಿಂದ ಅಪರಿಚಿತ ವ್ಯಕ್ತಿಯ ಖಾತೆಗೆ ವರ್ಗಾವಣೆಯಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next