Advertisement

ಚಿಕ್ಕಮಗಳೂರು: ಜಿಪಂ ಉಪಾಧ್ಯಕ್ಷ, ಲ್ಯಾಬ್ ಟೆಕ್ನಿಷಿಯನ್ ಗೆ ಕೋವಿಡ್ ಸೋಂಕು ದೃಢ

06:14 PM Jul 09, 2020 | keerthan |

ಚಿಕ್ಕಮಗಳೂರು: ಕೋವಿಡ್-19 ಸೋಂಕಿತರ ಸಂಖ್ಯೆ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದ್ದು, ಈ ಮಧ್ಯೆ ಜಿಪಂ ಉಪಾಧ್ಯಕ್ಷರು ಮತ್ತು ಲ್ಯಾಬ್ ಟೆಕ್ನಿಷಿಯನ್ ಗೂ ಸೋಂಕು ದೃಢವಾಗಿದ್ದು ಆತಂಕಕ್ಕೆ ಕಾರಣವಾಗಿದೆ.

Advertisement

ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಿಗೆ ಕೋವಿಡ್-19 ಸೋಂಕು ದೃಢವಾದ ಹಿನ್ನಲೆಯಲ್ಲಿ ಜಿಪಂ ಕಚೇರಿ ಭಾಗಶಃ ಸೀಲ್ ಡೌನ್ ಮಾಡುವಂತೆ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಉಪಾಧ್ಯಕ್ಷರು ಇತ್ತೀಚೆಗೆ ಕೆಡಿಪಿ ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯರೊಬ್ಬರಿಗೆ ಜತೆ ವೇದಿಕೆ ಹಂಚಿಕೊಂಡಿದ್ದರು. ವಿಪ ಸದಸ್ಯರಿಗೆ ಕೋವಿಡ್ ಸೋಂಕು ದೃಢವಾದ ಹಿನ್ನಲೆಯಲ್ಲಿ, ಅವರ ಸಂಪರ್ಕಕ್ಕೆ ಬಂದ ಹಿನ್ನೆಲೆಯಲ್ಲಿ ಜಿಪಂ ಉಪಾಧ್ಯಕ್ಷರ ಸ್ವಾಬ್ ಸಂಗ್ರಹಿಸಿ ಪ್ರಯೋಗಾಲಕ್ಕೆ ಕಳುಹಿಸಲಾಗಿತ್ತು. ಸದ್ಯ ಪಾಸಿಟಿವ್ ಬಂದ ಹಿನ್ನಲೆಯಲ್ಲಿ ಅವರ ಪ್ರಾಥಮಿಕ ಸಂಪರ್ಕಿತರಿಗೆ ಕ್ವಾರಂಟೈನ್ ಗೆ ಸೂಚಿಸಲಾಗಿದೆ.

ಟೆಕ್ನಿಷಿಯನ್ ಗೂ ಸೋಂಕು: ಜಿಲ್ಲೆಯಲ್ಲಿ ಸ್ಯಾಂಪಲ್ ಸಂಗ್ರಹಿಸುತ್ತಿದ್ದ ಲ್ಯಾಬ್ ಟೆಕ್ನಿಷಿಯನ್ ಗೂ ಕೋವಿಡ್-19 ಸೋಂಕು ತಾಗಿದೆ. ಇವರು ಚಿಕ್ಕಮಗಳೂರು ನಗರದ ಆಸ್ಪತ್ರೆಯಲ್ಲಿ ಕರ್ತವ್ಯದಲ್ಲಿದ್ದರು. ಪಿಪಿಇ ಕಿಟ್ ಧರಿಸಿಕೊಂಡು ಕೆಲಸಮಾಡುತ್ತಿದ್ದರೂ ಸೋಂಕು ತಾಗಿದೆ ಎನ್ನಲಾಗಿದೆ. ಇವರು ನೂರಾರು ಜನರ ಸ್ವಾಬ್ ತೆಗೆದುಕೊಂಡಿದ್ದರು. ಹೀಗಾಗಿ ಸ್ಯಾಂಪಲ್ ನೀಡಿದ ನೂರಾರು ಮಂದಿಗಯ ಆತಂಕಕ್ಕೆ ಕಾರಣವಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next