Advertisement

ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

10:19 AM Aug 03, 2019 | keerthan |

ಮಂಗಳೂರು: ಕುಲಶೇಖರ ಡೈರಿ ಸಮೀಪ ಶುಕ್ರವಾರ ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಸೆಂಟ್ರಿಂಗ್‌ ಕೆಲಸ ಮಾಡುತ್ತಿದ್ದ ಕಾರ್ಮಿಕ ಮೂಡುಪೆರಾರಿನ ಅರಿಕೆಪದವು ನಿವಾಸಿ ಮಹಾಬಲ ಗೌಡ (47) ಸಾವನ್ನಪ್ಪಿದ್ದಾರೆ.

Advertisement

ಮಧ್ಯಾಹ್ನ ವೇಳೆ ಕಟ್ಟಡದ 2ನೇ ಮಹಡಿಯಲ್ಲಿ ಸೆಂಟ್ರಿಂಗ್‌ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಅವರು ಆಯತಪ್ಪಿ 1ನೇ ಮಹಡಿಗೆ ಬಿದ್ದಿದ್ದರು. ತೀವ್ರ ಗಾಯಗೊಂಡಿದ್ದ ಅವರನ್ನು ಸ್ಥಳದಲ್ಲಿದ್ದ ಕಾರ್ಮಿ ಕರು ಕೂಡಲೇ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಅಷ್ಟರಲ್ಲಿಯೇ ಅವರು ಸಾವನ್ನಪ್ಪಿರುವುದಾಗಿ ಪರೀಕ್ಷಿಸಿದ ವೈದ್ಯರು ತಿಳಿಸಿದರು. ಮೃತರು ಪತ್ನಿ ಮತ್ತು ಇಬ್ಬರು ಪುತ್ರರ‌ನ್ನು ಅಗಲಿದ್ದಾರೆ.

ಕಂಕನಾಡಿ ನಗರ ಠಾಣೆಯ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿ ಕೊಂಡಿದ್ದಾರೆ.

ಮಹಾಬಲ ಗೌಡ ಹಲವು ವರ್ಷಗಳಿಂದ ಕೂಲಿ ಮತ್ತು ಮೇಸಿಕೆಲಸ ಮಾಡುತ್ತಿದ್ದು, ಸುಮಾರು 2 ತಿಂಗಳಿಂದ ಕುಲಶೇಖರದ ನಿರ್ಮಾಣ ಹಂತದ ಕಟ್ಟಡದಲ್ಲಿ ಕೆಲಸ ನಿರ್ವಹಿಸುತ್ತಿದ್ದರು.

ಅವರ ನಿಧನದಿಂದ ಕುಟುಂಬದ ಆಧಾರಸ್ತಂಭ ಕಳಚಿದ್ದು, ಪ್ರಸ್ತುತ ಮೂಡುಪೆರಾ ರಿನ ಶ್ರೀದೇವಿ ಯುವಕ ಸಂಘದವರು ನೆರವು ಒದಗಿಸಲು ಮುಂದಾಗಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next