Advertisement

ಕಾರ್ಮಿಕರ ಕೆಲಸದ ಅವಧಿ ಹೆಚ್ಚಳಕ್ಕೆ ವಿರೋಧ

09:41 AM May 27, 2020 | sudhir |

ಬಳ್ಳಾರಿ: ಕಾರ್ಮಿಕ ಕಾಯ್ದೆ ತಿದ್ದುಪಡಿ ಮಾಡಿ ಕೆಲಸದ ಅವಧಿಯನ್ನು ಹೆಚ್ಚಿಸಿರುವ ಸರ್ಕಾರದ ಕ್ರಮವನ್ನು ಖಂಡಿಸಿ, ನಗರದ ಡಿಸಿ ಕಚೇರಿ ಆವರಣದಲ್ಲಿ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ (ಜೆಸಿಟಿಯು) ವತಿಯಿಂದ ಆದೇಶ ಪ್ರತಿಯನ್ನು ದಹಿಸಿ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.

Advertisement

ರಾಜ್ಯ ಸರ್ಕಾರವು ಈಚೆಗೆ ಕಾರ್ಮಿಕರ ಕಾಯ್ದೆಯನ್ನು ತಿದ್ದುಪಡಿ ಮಾಡಿ ಕಾರ್ಮಿಕರ ಕೆಲಸ ಅವಧಿಯನ್ನು 8ರಿಂದ 10 ಗಂಟೆವರೆಗೆ ಹೆಚ್ಚಿಸಿದೆ. ಇದು ಕಾರ್ಮಿಕ ವಿರೋಧಿಯಾಗಿದೆ. ಈಗಾಗಲೇ ಕೋವಿಡ್‌-19ರ ಲಾಕ್‌ಡೌನ್‌ ಪರಿಣಾಮವಾಗಿ ದೇಶವ್ಯಾಪಿ ಕೋಟ್ಯಾಂತರ ಕಾರ್ಮಿಕರ ಬದುಕು ಅಸ್ತವ್ಯಸ್ತವಾಗಿದೆ. ಆರ್ಥಿಕ ಕುಸಿತದ ಫಲವಾಗಿ ಕಾರ್ಮಿಕ ವರ್ಗದ ಜೀವನ ಅತ್ಯಂತ ಅಭದ್ರತೆಯಲ್ಲಿ ಸಿಲುಕಿ ಅತಂತ್ರವಾಗಿರುವಾಗ, ಕಾರ್ಪೊರೇಟ್‌ ಉದ್ಯಮಿಗಳಿಗೆ, ತಮ್ಮಿಚ್ಛೆ ಬಂದಂತೆ
ಶೋಷಣೆಗೈಯಲು ಅನುಕೂಲ ಮಾಡಿಕೊಡುವ ಹುನ್ನಾರದಿಂದ ಸರ್ಕಾರ ಈ ಆದೇಶವನ್ನು ಹೊರಡಿಸಿದೆ ಎಂದು ಪ್ರತಿಭಟನಾನಿರತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ದೇಶದ ಎಲ್ಲ ಹೆಸರಾಂತ ಆರ್ಥಿಕ ತಜ್ಞರು ಎಲ್ಲ ಕಾರ್ಮಿಕ ವರ್ಗಕ್ಕೆ ಕನಿಷ್ಟ ನಾಲ್ಕು ತಿಂಗಳುಗಳ ಕಾಲ ತಿಂಗಳಿಗೆ 10 ಸಾವಿರ ರೂ. ಹಣವನ್ನು ಕಾರ್ಮಿಕರ ಖಾತೆಗಳಿಗೆ ಹಾಕಬೇಕು ಎಂದು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ಆರ್ಥಿಕ ತಜ್ಞರ ಸಲಹೆಯನ್ನು ಗಣನೆಗೆ ತೆಗೆದುಕೊಳ್ಳದ ಸರ್ಕಾರವು ಕಾರ್ಮಿಕರ ನ್ಯಾಯಬದ್ಧ ಹಕ್ಕುಗಳನ್ನು ಹರಣಗೊಳಿಸಲು ಹೊರಟಿದೆ. ಹಾಗಾಗಿ ಆದೇಶ
ಪ್ರತಿಯನ್ನು ದಹಿಸಿ ಪ್ರತಿಭಟನೆ ನಡೆಸಲಾಗಿದೆ. ಈ ಬಗ್ಗೆ ರಾಜ್ಯ ಸರ್ಕಾರ ಕೂಡಲೇ ಕಾರ್ಮಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕ್ರಮಕೈಗೊಳ್ಳದಿದ್ದಲ್ಲಿ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಪ್ರತಿಭಟನಾನಿರತರು ಎಚ್ಚರಿಸಿದ್ದಾರೆ.

ಈ ವೇಳೆ ಪ್ರತಿಭಟನೆಯಲ್ಲಿದ್ದ ಐಎನ್‌ ಟಿಯುಸಿ, ಎಐಟಿಯುಸಿ, ಸಿಐಟಿಯು, ಎಐಯುಟಿಯುಸಿ ಮುಖಂಡರಾದ ಕೆ.
ಸೋಮಶೇಖರ್‌, ಎ.ಆರ್‌.ಎಂ. ಇಸ್ಮಾಯಿಲ್‌, ಜೆ. ಸತ್ಯಬಾಬು, ಎಚ್‌.ಎ.ಆದಿಮೂರ್ತಿ, ಆರ್‌. ಸೋಮಶೇಖರ್‌ಗೌಡ, ಎ. ದೇವದಾಸ್‌, ಹಿರಿಯ ಕಾರ್ಮಿಕ ಮುಖಂಡರಾದ ಟಿ.ಜಿ.ವಿಠ್ಠಲ್‌, ಚನ್ನಪ್ಪ, ಸಂಗನಕಲ್ಲು ಕಟ್ಟೆಬಸಪ್ಪ ಸೇರಿದಂತೆ ಹಲವರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next