Advertisement

ಭಾರತದ ಗಡಿ ಪ್ರವೇಶಿಸಲು ಯತ್ನಿಸಿದ ಮೂವರು ಉಗ್ರರ ಹತ್ಯೆ

09:45 PM Nov 03, 2022 | Team Udayavani |

ಜಮ್ಮು: ಭಾರತದ ಗಡಿ ಪ್ರವೇಶಿಸಲು ಯತ್ನಿಸುತ್ತಿದ್ದ ಮೂವರು ಉಗ್ರರನ್ನು ಭಾರತೀಯ ಸೇನೆಯ ಯೋಧರು ಹೊಡೆದುರುಳಿಸಿದ್ದಾರೆ.

Advertisement

ಜಮ್ಮು ಮತ್ತು ಕಾಶ್ಮೀರದ ಪೂಂಚ್‌ ಜಿಲ್ಲೆಯ ನಿಯಂತ್ರಣಾ ರೇಖೆ(ಎಲ್‌ಒಸಿ)ಯ ಬಳಿ ಗುರುವಾರ ಈ ಘಟನೆ ನಡೆದಿದೆ.

ಪಾಕಿಸ್ತಾನ ಆಕ್ರಮಿತ ಕಾಶ್ಮೀರ(ಪಿಒಕೆ)ಕ್ಕೆ ಹೊಂದಿಕೊಂಡಿರುವ ನಿಯಂತ್ರಣಾ ರೇಖೆಯಲ್ಲಿ ಮೂವರು ಉಗ್ರರು ಗಡಿ ದಾಟಿ ಭಾರತದ ಒಳಗೆ ನುಗ್ಗಲು ಪ್ರಯತ್ನಿಸುತ್ತಿದ್ದರು. ಗಡಿ ಕಾಯುತ್ತಿದ್ದ ಭಾರತೀಯ ಯೋಧರು ಇದನ್ನು ಗಮನಿಸಿ, ಅಲರ್ಟ್‌ ಆಗಿದ್ದಾರೆ. ಉಗ್ರರು ಈ ವೇಳೆ ಯೋಧರ ಮೇಲೆ ಗುಂಡು ಹಾರಿಸಲು ಆರಂಭಿಸಿದ್ದಾರೆ.

ಪ್ರತಿಯಾಗಿ ಗುಂಡಿನ ದಾಳಿ ನಡೆಸಿ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಈ ಪೈಕಿ ಒಬ್ಬ ಉಗ್ರನ ಮೃತದೇಹ ಇದ್ದು, ಉಳಿದ ಇಬ್ಬರು ಉಗ್ರರ ಮೃತದೇಹವನ್ನು ಪಿಒಕೆ ಗ್ರಾಮಸ್ಥರು ಪಡೆದಿದ್ದಾರೆ. ಉಗ್ರರ ಬಳಿಯಿಂದ ಎರಡು ಎಕೆ 47, ಪಿಸ್ತೂಲ್‌ ಮತ್ತು ಮದ್ದು-ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಭಾರತೀಯ ಸೇನೆಯ ವಕ್ತಾರರು ಮಾಹಿತಿ ನೀಡಿದ್ದಾರೆ.

ಇಬ್ಬರು ವಲಸೆ ಕಾರ್ಮಿಕರ ಮೇಲೆ ದಾಳಿ:

Advertisement

ಜಮ್ಮು ಮತ್ತು ಕಾಶ್ಮೀರದ ಅನಂತನಾಗ್‌ ಜಿಲ್ಲೆಯಲ್ಲಿ ಉಗ್ರರು ನೇಪಾಳಿ ಪ್ರಜೆ ಸೇರಿದಂತೆ ಒಟ್ಟು ಇಬ್ಬರು ವಲಸೆ ಕಾರ್ಮಿಕರ ಮೇಲೆ ಗುಂಡು ಹಾರಿಸಿ, ಗಾಯಗೊಳಿಸಿದ್ದಾರೆ. ಚಿಕಿತ್ಸೆಗಾಗಿ ಇವರನ್ನು ಸ್ಥಳೀಯ ಆಸ್ಪತ್ರಗೆ ದಾಖಲಿಸಲಾಗಿದೆ. ಈ ಇಬ್ಬರು ಕಾರ್ಮಿಕರು ಅನಂತ್‌ನಾಗ್‌ ಜಿಲ್ಲೆಯ ಬೊಡಿಯಾಲ್‌ಗಾಮ್‌ನ ಖಾಸಗಿ ಶಾಲೆಯೊಂದರಲ್ಲಿ ಕೆಲಸ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next