Advertisement

ಸಮಯಕ್ಕೆ ಸರಿಯಾಗಿ ಬಾರದ ಬಸ್ : ವಿದ್ಯಾರ್ಥಿಗಳಿಂದ ರಸ್ತೆ ತಡೆದು  ಪ್ರತಿಭಟನೆ  

04:16 PM Dec 13, 2021 | Team Udayavani |

ಬಾಗಲಕೋಟೆ: ಸಮಯಕ್ಕೆ ಸರಿಯಾಗಿ ಬಸ್ ಬಿಡದಿರೋದಕ್ಕೆ ವಿದ್ಯಾರ್ಥಿಗಳು ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತ ಪಡಿಸಿದ ಘಟನೆ ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಕುಳಗೇರಿ ಕ್ರಾಸ್ ಗ್ರಾಮದಲ್ಲಿ ನಡೆದಿದೆ.

Advertisement

ಕಳೆದ ಕೆಲ ದಿನಗಳಿಂದ ಕುಳಗೇರಿ ಕ್ರಾಸ್ ಗ್ರಾಮದಿಂದ ಶಾಲೆಗೆ ತೆರಳಲು ವಿದ್ಯಾರ್ಥಿಗಳಿಗೆ ಸರಿಯಾದ ಸಮಯಕ್ಕೆ ಬಸ್ ವ್ಯವಸ್ಥೆಯಿಲ್ಲ. ಈ ಅವ್ಯವಸ್ಥೆಗೆ ಬೇಸತ್ತ ವಿದ್ಯಾರ್ಥಿಗಳು ಇಂದು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.

ಹುಬ್ಬಳ್ಳಿ – ಸೋಲ್ಹಾಪೂರ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ ವೇಳೆ ಕೆಲಕಾಲ ಸಂಚಾರ ಸ್ಥಗಿತ ಉಂಟಾಯಿತು. ವಿದ್ಯಾರ್ಥಿಗಳ ತೊಂದರೆ ಅರಿತ ಗ್ರಾಮಸ್ಥರು,  ಹಾಗೂ ಪಾಲಕರು ಪ್ರತಿಭಟನೆಗೆ ಸಾಥ್ ನೀಡಿದರು.

ಈ ವೇಳೆ ಕುಳಗೇರಿ ಕ್ರಾಸ್ ಗ್ರಾಮದಿಂದ ಬೀರನೂರ, ತಳಕವಾಡ, ಕರ್ಲಕೊಪ್ಪ, ಹಾಗನೂರ ಸೇರಿದಂತೆ ವಿವಿದ ಮಾರ್ಗಗಳಿಗೆ ಬಸ್ ಸೌಲಭ್ಯ ಕಲ್ಪಿಸಲು ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಆಗ್ರಹಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next